ಮೈಸೂರು

ನಂಜನಗೂಡು | ರೈತನ ಮೇಲೆ ಚಿರತೆ ದಾಳಿ

ನಂಜನಗೂಡು: ಜಮೀನಿನಲ್ಲಿದ್ದ ರೈತನ ಮೇಲೆ ಚಿರತೆಯೊಂದು ದಾಳಿ ಮಾಡಿ, ನಂತರ ಮೇಕೆಯನ್ನು ಕೊಂದು ಹಾಕಿರುವ ಘಟನೆ ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ.

ದಾಳಿಯಿಂದ ಗ್ರಾಮದ ಮಹದೇವಯ್ಯ ಗಾಯಗೊಂಡಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಇದೇ ವೇಳೆ ಪಕ್ಕದಲ್ಲೇ ಮೇಯುತ್ತಿದ್ದ ಮೇಕೆ ಮೇಲೆ ದಾಳಿ ಮಾಡಿ ಕೊಂದು ಹಾಕಿದೆ.

ಮಹದೇವಯ್ಯ ತಮ್ಮ ಜಮೀನಿನಲ್ಲಿ ಮೇಕೆ ಮೇಯಿಸುತ್ತಿರುವ ವೇಳೆ ಏಕಾಏಕಿ ಚಿರತೆ ಅವರ ಮೇಲೆ ದಾಳಿ ನಡೆಸಿದೆ. ಈ ವೇಳೆ ಕೆಳಗೆ ಬಿದ್ದು ಚಿರತೆಯಿಂದ ತಪ್ಪಿಸಿಕೊಂಡ ಅವರಿಗೆ ಕೈಯಲ್ಲಿ ಸಣ್ಣ ಗಾಯವಾಗಿದೆ. ಬಳಿಕ ಚಿರತೆ ಪಕ್ಕದಲ್ಲೆ ಇದ್ದ ಮೇಕೆ ಮೇಲೆ ದಾಳಿ ನಡೆಸಿ ಮೇಕೆಯನ್ನು ಕೊಂದು ಹಾಕಿ ಎಳೆದೊಯ್ಯುವ ಸಮಯ ಜನರು ಕೂಗಿದ ಬಳಿಕ ಮೇಕೆ ದೇಹವನ್ನು ಅಲ್ಲೆ ಬಿಟ್ಟು ಹೋಗಿದೆ. ಬಳಿಕ ಸಂಜೆ ವೇಳೆಗೆ ನಾಯಿ ಮೇಲೆಯೂ ದಾಳಿ ನಡೆಸಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಬೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಇಷ್ಟರಲ್ಲೇ ಬೋನು ಇರಿಸಿ ಚಿರತೆ ಸೆರೆಗೆ ಕ್ರಮ ಕೈಗೊಳ್ಳುವುದಾಗಿ ಜೊತೆಗೆ ರೈತನಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.

ಗ್ರಾಮದಲ್ಲಿ ಈವರೆಗೂ 20ಮೇಕೆಗಳು ಚಿರತೆ ದಾಳಿಗೆ ಒಳಗಾಗಿದ್ದು, ಅರಣ್ಯ ಅಧಿಕಾರಿಗಳು ಕೂಡಲೇ ಹೆಚ್ಚು ಬೋನ್‌ ತರಿಸಿ ಹಾವಳಿ ಹೆಚ್ಚಿರುವ ಕಡೆಗಳಲ್ಲಿ ಇರಿಸಬೇಕು. ದಾಳಿ ನಡೆಸಿರುವ ಹಿನ್ನೆಲೆ ಜನರಲ್ಲಿ ಭೀತಿ ಹೆಚ್ಚಾಗಿದೆ. ಇಲಾಖೆ ತ್ವರಿತ ಕ್ರಮಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

3 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

12 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

12 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

12 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

15 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

15 hours ago