ನಂಜನಗೂಡು: ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನನಾಯಿಗಳ ದಾಳಿಗೆ ಮೃತಪಟ್ಟ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.
ತಾಲೂಕಿನ ಕೊತ್ತನಹಳ್ಳಿ ಗ್ರಾಮದ ಓಂಕಾರ್ ಅರಣ್ಯ ಪ್ರದೇಶದಲ್ಲಿ ಜಿಂಕೆಯೊಂದನ್ನು ನಾಯಿಗಳು ಬೇಟೆಯಾಡಿವೆ. ನಾಯಿಗಳ ದಾಳಿಕೆ ಜಿಂಕೆ ಬಲಿಯಾಗಿದ್ದು, ನಾಯಿಗಳು ಭೇಟಿಯಾಡಿದ್ದ ಜಿಂಕೆಯನ್ನು ಕೊತ್ತನಹಳ್ಳಿ ಗ್ರಾಮದ ಗಣೇಶ್ (48), ಮತ್ತು ಕೃಷ್ಣ (32) ಎಂಬುವವರು ಮಾಂಸವನ್ನು ಕತ್ತರಿಸುತ್ತಿದ್ದ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.
ಇದರಲ್ಲಿ ಗಣೇಶ್ ಎಂಬಾತನನ್ನು ಇಲಾಖಾ ಅಧಿಕಾರಿಗಳು ಬಂಧಿಸಲಾಗಿದ್ದು, ಮತ್ತೋರ್ವ ಕೃಷ್ಣ ಸ್ಥಳದಿಂದ ಪರಾರಿಯಾಗಿದ್ದಾನೆ.
ಅರಣ್ಯ ಇಲಾಖೆ ಅಧಿಕಾರಿಗಳು ಜಿಂಕೆಯ ಮಾಂಸ ಮತ್ತು ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಪರಾರಿಯಾಗಿರುವ ವ್ಯಕ್ತಿಗಾಗಿ ಅಧಿಕಾರಿಗಳು ಬಲೆ ಬೀಸಿದ್ದಾರೆ.
ಓಂಕಾರ್ ಅರಣ್ಯ ವ್ಯಾಪ್ತಿಯ ವಲಯ ಅರಣ್ಯಾಧಿಕಾರಿ ಸತೀಶ್ ಹಾಗೂ ಸಿಬ್ಬಂದಿಗಳು ಈ ದಾಳಿ ಮಾಡಿದ್ದು, ಪ್ರಕರಣ ದಾಖಲಾಗಿದೆ.
ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…
ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…
ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…