ಮೈಸೂರು: ಮಳೆಯಿಂದ ಉಂಟಾದ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ ಮಹದೇವಪ್ಪ ಶನಿವಾರ(ಆ.3) ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂತ್ರಸ್ತರ ಯೋಗಕ್ಷೇಮ ವಿಚಾರಿಸಿದರು.
ನಂಜನಗೂಡು ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶವಾದ ಬೊಕ್ಕಹಳ್ಳಿ ಗ್ರಾಮಕ್ಕೆ ಬೇಟಿ ನೀಡಿ ಪ್ರವಾಹದಿಂದ ಹಾನಿ ಆಗಿರುವ ಬೆಳೆ ನಾಶ ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿ ಆಗಿರುವ ಕುರಿತು ಪರಿಶೀಲನೆ ನಡೆಸಿದರು.
ನಂತರ ಗ್ರಾಮದ ಪ್ರಾಥಮಿಕ ಶಾಲೆಯಲ್ಲಿ ತೆರೆದಿರುವ ಕಾಳಜಿ ಕೇಂದ್ರಕ್ಕೆ ಬೇಟಿ ನೀಡಿ ಸಂತ್ರಸ್ತರ ಯೋಗಕ್ಷೇಮವನ್ನು ವಿಚಾರಿಸಿದರು. ಶಾಲೆಯ ಪಕ್ಕದ ಅಂಗನವಾಡಿ ಕೇಂದ್ರದಲ್ಲಿ ಸಂತ್ರಸ್ತರಿಗೆ ವೈದ್ಯಕೀಯ ನೆರವು ನೀಡಲಾಗುತ್ತಿದ್ದು, ಈ ಸಂಬಂಧ ಪರಿಶೀಲನೆ ನಡೆಸಿ ಸಂತ್ರಸ್ತರಿಗೆ ಅಗತ್ಯ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಕಬಿನಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ನೀರು ಹರಿದು ಬಂದಿದ್ದರಿಂದ ಪ್ರವಾಹ ಉಂಟಾಗಿ ರೈತರ ಬೆಳೆ ಹಾಗೂ ಮನೆ ಹಾನಿ ಉಂಟಾಗಿದೆ. ಮೈಸೂರು ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದರಿಂದ ಕಡಿಮೆ ಪ್ರಮಾಣದ ಹಾನಿ ಆಗಿದೆ. ಎನ್ ಡಿ ಆರ್ ಎಫ್ ನಿಯಮಾವಳಿ ಪ್ರಕಾರ ಪರಿಹಾರ ನೀಡಲಾಗುವುದು. 46 ಮನೆಗಳಿಗೆ ನೀರು ಬಂದಿದೆ. ಗಂಜಿ ಕೇಂದ್ರದಲ್ಲಿ 446 ಜನ ಸೌಲಭ್ಯ ಪಡೆಯುತ್ತಿದ್ದಾರೆ. 80 ಕುಟುಂಬಗಳು ಪ್ರವಾಹದಿಂದ ಪೀಡಿತರಾಗಿದ್ದಾರೆ. ಈ 80 ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದು ಸಚಿವ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…