ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು.
ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ ಸ್ವಾಮಿಗೆ ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆ ನಡೆಯಿತು. ನಂತರ, ಋತ್ವಿಕರು ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗದ ಪೀಠಕ್ಕೆ ಹೊತ್ತು ತಂದರು. ಮಹೂರ್ತದ ಸಮಯಕ್ಕೆ ಸರಿಯಾಗಿ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ಶಾಸಕ ಬಿ.ಹರ್ಷವರ್ಧನ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಥಕ್ಕೆ ಪೂಜೆ ಸಲ್ಲಿಸಿ ಚಕ್ರಗಳಿಗೆ ಈಡುಗಾಯಿ ಹೊಡೆದು ಉತ್ಸವಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ 6.35 ಕ್ಕೆ ಭಕ್ತರು ಹರ್ಷೋದ್ಗಾರ, ಜೈಕಾರಗಳ ನಡುವೆ ರಥಗಳನ್ನು ಎಳೆದರು. ಬೆಳಿಗ್ಗೆ 9ಕ್ಕೆ ಪಂಚರಥಗಳು ಸ್ವಸ್ಥಾನ ಸೇರಿದವು.
ಅಲಂಕೃತ ಗೌತಮ ರಥವನ್ನು ಕಣ್ತುಂಬಿಕೊಳ್ಳಲು ಕಾದಿದ್ದ ಭಕ್ತರು ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿ ಕಂಡು ಭಾವಪರವಶರಾದರು. ವರ್ಣಮಯ ಅಲಂಕಾರಿಕ ಬಟ್ಟೆ, ಹೂವು, ಧ್ವಜಗಳಿಂದ ಸಿಂಗರಿಸಲಾಗಿದ್ದ ರಥದಲ್ಲಿ ಹೂವಿನಿಂದ ಬಿಡಿಸಲಾಗಿದ್ದ ‘ಶ್ರೀ ಶ್ರೀಕಂಠೇಶ್ವರ ರಥೋತ್ಸವ’ ಫಲಕ ವಿಶೇಷ ಗಮನ ಸೆಳೆಯಿತು.
ಪ್ರಸಾದ ವಿನಿಯೋಗ: ಜಾತ್ರೆಗೆ ಬಂದ ಭಕ್ತರಿಗೆ ಹಲವು ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ದೇವಾಲಯದ ಆವರಣ, ರಥಬೀದಿ, ರಾಷ್ಟ್ರಪತಿ ರಸ್ತೆ, ಬಜಾರ್ ರಸ್ತೆ, ಎಂಜಿಎಸ್ ರಸ್ತೆಗಳಲ್ಲಿ ಉಪಾಹಾರ, ಹಣ್ಣುಹಂಪಲು, ಶುದ್ಧ ಕುಡಿಯುವ ನೀರು, ಮಜ್ಜಿಗೆ, ಪಾನಕ ನೀಡಿದರು. ಬೈಪಾಸ್ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಸ್ನಾನಘಟ್ಟದಲ್ಲಿ ಸಾವಿರಾರು ಭಕ್ತರು ದೈವಕ್ಕೆ ಮುಡಿ ನೀಡಿ ಮಿಂದರು.
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…
ಮೈಸೂರು : ರಾಜ್ಯದಲ್ಲಿ ಕೃಷಿ, ತೋಟಗಾರಿಕೆ, ಪಶುವೈದ್ಯಕೀಯ ಮತ್ತು ಅರಣ್ಯ ಶಾಸ್ತ್ರ ಪದವಿಗಳಿಗೆ ಕೃಷಿಕರ ಕೋಟಾದಡಿ (50%) ಅಡಿಯಲ್ಲಿ ವಿದ್ಯಾರ್ಥಿಗಳಿಗೆ…
ಮುಂಬೈ : ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ…
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರಾಚನೆಗೆ ಒತ್ತಡ ಹೆಚ್ಚಾಗಿದ್ದು, 20ಕ್ಕೂ ಹೆಚ್ಚು ಶಾಸಕರು ಇಂದು (ಭಾನುವಾರ)…
ಕನ್ನಡಕ್ಕೆ ಶ್ರೇಷ್ಠ ದಾಂಪತ್ಯ ಗೀತೆಗಳನ್ನು ನೀಡಿದ, ಪ್ರೇಮಕವಿಯೆಂದೇ ಹೆಸರಾದ ನಾಡಿನ ಹಿರಿಯ ಕವಿ ಕೆ.ಎಸ್.ನರಸಿಂಹಸ್ವಾಮಿ ಅವರ ಗೌರವಾರ್ಥವಾಗಿ ಹುಟ್ಟೂರಾದ ಕಿಕ್ಕೇರಿಯ…
ಮೈಸೂರಿನಲ್ಲಿ ಸ್ವಲ್ಪ ಮಳೆಯಾದರೂ ರೂಪಾನಗರ ಬಡಾವಣೆಯಲ್ಲಿ ವಿದ್ಯುತ್ ಕಡಿತ ಮಾಡಲಾಗುತ್ತದೆ. ರಾತ್ರಿ ವೇಳೆ ಮಳೆ ಬಂದರಂತೂ ವಿದ್ಯುತ್ ಸಂಪರ್ಕಕಲ್ಪಿಸುವುದು ಬೆಳಿಗ್ಗೆಯೇ.…