ಮೈಸೂರು

ನಂಜನಗೂಡು: ಅಪಾರ ಭಕ್ತರ ನಡುವೆ ‘ನಂಜುಂಡನ ದೊಡ್ಡ ಜಾತ್ರೆ’

ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು.

ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ ಸ್ವಾಮಿಗೆ ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆ ನಡೆಯಿತು. ನಂತರ, ಋತ್ವಿಕರು ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗದ ಪೀಠಕ್ಕೆ ಹೊತ್ತು ತಂದರು. ಮಹೂರ್ತದ ಸಮಯಕ್ಕೆ ಸರಿಯಾಗಿ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಶಾಸಕ ಬಿ.ಹರ್ಷವರ್ಧನ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಥಕ್ಕೆ ಪೂಜೆ ಸಲ್ಲಿಸಿ ಚಕ್ರಗಳಿಗೆ ಈಡುಗಾಯಿ ಹೊಡೆದು ಉತ್ಸವಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ 6.35 ಕ್ಕೆ ಭಕ್ತರು ಹರ್ಷೋದ್ಗಾರ, ಜೈಕಾರಗಳ ನಡುವೆ ರಥಗಳನ್ನು ಎಳೆದರು. ಬೆಳಿಗ್ಗೆ 9ಕ್ಕೆ ಪಂಚರಥಗಳು ಸ್ವಸ್ಥಾನ ಸೇರಿದವು.

ಅಲಂಕೃತ ಗೌತಮ ರಥವನ್ನು ಕಣ್ತುಂಬಿಕೊಳ್ಳಲು ಕಾದಿದ್ದ ಭಕ್ತರು ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿ ಕಂಡು ಭಾವಪರವಶರಾದರು. ವರ್ಣಮಯ ಅಲಂಕಾರಿಕ ಬಟ್ಟೆ, ಹೂವು, ಧ್ವಜಗಳಿಂದ ಸಿಂಗರಿಸಲಾಗಿದ್ದ ರಥದಲ್ಲಿ ಹೂವಿನಿಂದ ಬಿಡಿಸಲಾಗಿದ್ದ ‘ಶ್ರೀ ಶ್ರೀಕಂಠೇಶ್ವರ ರಥೋತ್ಸವ’ ಫಲಕ ವಿಶೇಷ ಗಮನ ಸೆಳೆಯಿತು.

  1. ಮೊದಲು ಗಣಪತಿ ರಥ, ನಂತರ ಗೌತಮ ರಥ ಸಾಗಿತು. ಬಳಿಕ ಚಂಡೀಕೇಶ್ವರ ಹಾಗೂ ಸುಬ್ರಹ್ಮಣ್ಯ ರಥ ತೆರಳಿದವು. ಕೊನೆಯಲ್ಲಿ ಪಾರ್ವತಿ ದೇವಿ ರಥ ಸಾಗಿತು. ಗೌತಮ ರಥ ಸುಮಾರು ಎರಡೂವರೆ ತಾಸಿನಲ್ಲಿ ಸ್ವಸ್ಥಾನಕ್ಕೆ ಮರಳಿದರೆ, ಪಾರ್ವತಿದೇವಿ ರಥ ಒಂದೂವರೆ ತಾಸಿನಲ್ಲಿ ಸ್ವಸ್ಥಾನಕ್ಕೆ ತಲುಪಿತು. ಸುಮಾರು ನಾಲ್ಕು ತಾಸುಗಳ ಕಾಲ ರಥಬೀದಿ ಪಂಚ ರಥಗಳು ವಿರಾಜಮಾನವಾಗಿ ಸಾಗಿ ಭಕ್ತರ ಮನಸೂರೆಗೊಂಡವು. ಐದು ರಥಗಳು ರಥದ ಬೀದಿಗಳಲ್ಲಿ ಚಲಿಸುವಾಗ ರಸ್ತೆಯ ಇಕ್ಕೆಲಗಳಲ್ಲಿ ನೆರದಿದ್ದ ಲಕ್ಷಾಂತರ ಭಕ್ತರು ಹಣ್ಣು-ದವನ ಎಸೆದು ಹರಕೆ ತೀರಿಸಿದರು. ನವವಧುವರರು ಇಷ್ಟಾರ್ಥ ನೆರವೇರಿಸುವಂತೆ ಕೋರಿಕೊಂಡರು.

ಪ್ರಸಾದ ವಿನಿಯೋಗ: ಜಾತ್ರೆಗೆ ಬಂದ ಭಕ್ತರಿಗೆ ಹಲವು ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ದೇವಾಲಯದ ಆವರಣ, ರಥಬೀದಿ, ರಾಷ್ಟ್ರಪತಿ ರಸ್ತೆ, ಬಜಾರ್ ರಸ್ತೆ, ಎಂಜಿಎಸ್ ರಸ್ತೆಗಳಲ್ಲಿ ಉಪಾಹಾರ, ಹಣ್ಣುಹಂಪಲು, ಶುದ್ಧ ಕುಡಿಯುವ ನೀರು, ಮಜ್ಜಿಗೆ, ಪಾನಕ ನೀಡಿದರು. ಬೈಪಾಸ್‌ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಸ್ನಾನಘಟ್ಟದಲ್ಲಿ ಸಾವಿರಾರು ಭಕ್ತರು ದೈವಕ್ಕೆ ಮುಡಿ ನೀಡಿ ಮಿಂದರು.

lokesh

Recent Posts

ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ : ವೇತನ ಪರಿಷ್ಕರಣೆಗೆ ಒಪ್ಪಿದೆ ; ರದ್ದಾಗುತ್ತಾ ಮುಷ್ಕರ?

ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯ ಸಾರಿಗೆ ನಿಗಮಗಳ (KSRTC, BMTC, NWKRTC, KKRTC) ಸಿಬ್ಬಂದಿಗೆ 26 ತಿಂಗಳ ಬಾಕಿ…

17 mins ago

ಮಹಾರಾಷ್ಟ್ರ | ಮುಸ್ಲಿಮರಿಗೆ ನೀಡಲಾಗಿದ್ದ ಶೇ.5ಮೀಸಲಾತಿ ರದ್ದು

ಮುಂಬೈ : ಮಹಾರಾಷ್ಟ್ರದ ಮಹಾಯುತಿ ಸರ್ಕಾರವು ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5ರಷ್ಟು ಮೀಸಲಾತಿಯನ್ನು…

34 mins ago

ಮೈಸೂರು | ಹೀಲಿಯಂ ಅನಿಲ ಬಲೂನ್‌ ನಿಷೇಧ ; ಕಮಿಷನರ್‌ ಆದೇಶ

ಮೈಸೂರು : ಇತ್ತೀಚಿಗೆ ನಗರದ ಅರಮನೆ ಸಮೀಪದಲ್ಲಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಘಟನೆಗೆ ಸಂಬಂಧಿದಂತೆ, ಸಾರ್ವಜನಿಕ ಶಾಂತಿ, ಸುರಕ್ಷತೆ…

48 mins ago

ನಮೀಬಿಯಾ ವಿರುದ್ಧ ಗೆಲುವು : ಸೂಪರ್‌ 8 ಸುತ್ತಿಗೆ ಎಂಟ್ರಿ ಕೊಟ್ಟ ಪಾಕಿಸ್ತಾನ

ಕೊಲಂಬೊ : ಐಸಿಸಿ ಪುರುಷರ ಟಿ20 ವರ್ಲ್ಡ್ ಕಪ್ 2026ರಲ್ಲಿ ಪಾಕಿಸ್ತಾನ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ನಮೀಬಿಯಾವನ್ನು…

1 hour ago

ಸೇನಾ ವಿಚಾರ ಪ್ರಸ್ತಾಪಿಸಿದ ರಾಹುಲ್‌ ಗಾಂಧಿ: ಲೋಕಸಭೆಯಲ್ಲಿ ಗದ್ದಲ, ಕೋಲಾಹಲ

ನವದೆಹಲಿ: ಎಂ.ಎಂ.ನರವಣೆ ಅವರ ಅಪ್ರಕಟಿತ ಪುಸ್ತಕದ ಕುರಿತು ನಿಯತಕಾಲಿಕೆಯೊಂದರಲ್ಲಿ ಪ್ರಕಟವಾದ ಲೇಖನದ ಪ್ರತಿಯನ್ನು ರಾಹುಲ್‌ ಗಾಂಧಿ ಸದನದಲ್ಲಿ ಪ್ರದರ್ಶಿಸಿದರು. ಈ…

1 hour ago

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು "ಅಸಾಧಾರಣ" ಆಗಿರುವುದಾಗಿ ಹೇಳಿದ್ದಾರೆ.…

1 hour ago