ಮೈಸೂರು

ನಂಜನಗೂಡು: ಅಪಾರ ಭಕ್ತರ ನಡುವೆ ‘ನಂಜುಂಡನ ದೊಡ್ಡ ಜಾತ್ರೆ’

ನಂಜನಗೂಡು: ಪುರಾಣ ಪ್ರಸಿದ್ಧ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ರಥೋತ್ಸವ ಭಾನುವಾರ ಬೆಳಿಗ್ಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ನಿರೀಕ್ಷೆಗೂ ಮೀರಿ ಬಂದಿದ್ದ ಭಕ್ತರು ಮಹೋತ್ಸವವನ್ನು ಕಣ್ತುಂಬಿಕೊಂಡು ಧನ್ಯತಾಭಾವದಲ್ಲಿ ಮಿಂದರು. ಹಣ್ಣು–ದವನ ಎಸೆದು ಹರಕೆ ತೀರಿಸಿದರು.

ಮುಂಜಾನೆ ದೇವಾಲಯದಲ್ಲಿ ಶ್ರೀಕಂಠೇಶ್ವರ ಸ್ವಾಮಿಗೆ ಕ್ಷೀರಾಭಿಷೇಕ, ಫಲಪಂಚಾಮೃತಾಭಿಷೇಕ, ಮಹೋನ್ನತ ಪೂರ್ವಕ ಏಕದಶಾವರ ರುದ್ರಾಭಿಷೇಕ, ಪ್ರಾತಃಕಾಲ ಪೂಜೆ ನಡೆಯಿತು. ನಂತರ, ಋತ್ವಿಕರು ಪಾರ್ವತಿ ಸಮೇತ ಶ್ರೀಕಂಠೇಶ್ವರ ಸ್ವಾಮಿಯ ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ದೇವಾಲಯದ ಮುಂಭಾಗದ ಪೀಠಕ್ಕೆ ಹೊತ್ತು ತಂದರು. ಮಹೂರ್ತದ ಸಮಯಕ್ಕೆ ಸರಿಯಾಗಿ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.

ಶಾಸಕ ಬಿ.ಹರ್ಷವರ್ಧನ್ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ರಥಕ್ಕೆ ಪೂಜೆ ಸಲ್ಲಿಸಿ ಚಕ್ರಗಳಿಗೆ ಈಡುಗಾಯಿ ಹೊಡೆದು ಉತ್ಸವಕ್ಕೆ ಚಾಲನೆ ನೀಡಿದರು. ಬೆಳಿಗ್ಗೆ 6.35 ಕ್ಕೆ ಭಕ್ತರು ಹರ್ಷೋದ್ಗಾರ, ಜೈಕಾರಗಳ ನಡುವೆ ರಥಗಳನ್ನು ಎಳೆದರು. ಬೆಳಿಗ್ಗೆ 9ಕ್ಕೆ ಪಂಚರಥಗಳು ಸ್ವಸ್ಥಾನ ಸೇರಿದವು.

ಅಲಂಕೃತ ಗೌತಮ ರಥವನ್ನು ಕಣ್ತುಂಬಿಕೊಳ್ಳಲು ಕಾದಿದ್ದ ಭಕ್ತರು ಶ್ರೀಕಂಠೇಶ್ವರಸ್ವಾಮಿ ಉತ್ಸವಮೂರ್ತಿ ಕಂಡು ಭಾವಪರವಶರಾದರು. ವರ್ಣಮಯ ಅಲಂಕಾರಿಕ ಬಟ್ಟೆ, ಹೂವು, ಧ್ವಜಗಳಿಂದ ಸಿಂಗರಿಸಲಾಗಿದ್ದ ರಥದಲ್ಲಿ ಹೂವಿನಿಂದ ಬಿಡಿಸಲಾಗಿದ್ದ ‘ಶ್ರೀ ಶ್ರೀಕಂಠೇಶ್ವರ ರಥೋತ್ಸವ’ ಫಲಕ ವಿಶೇಷ ಗಮನ ಸೆಳೆಯಿತು.

  1. ಮೊದಲು ಗಣಪತಿ ರಥ, ನಂತರ ಗೌತಮ ರಥ ಸಾಗಿತು. ಬಳಿಕ ಚಂಡೀಕೇಶ್ವರ ಹಾಗೂ ಸುಬ್ರಹ್ಮಣ್ಯ ರಥ ತೆರಳಿದವು. ಕೊನೆಯಲ್ಲಿ ಪಾರ್ವತಿ ದೇವಿ ರಥ ಸಾಗಿತು. ಗೌತಮ ರಥ ಸುಮಾರು ಎರಡೂವರೆ ತಾಸಿನಲ್ಲಿ ಸ್ವಸ್ಥಾನಕ್ಕೆ ಮರಳಿದರೆ, ಪಾರ್ವತಿದೇವಿ ರಥ ಒಂದೂವರೆ ತಾಸಿನಲ್ಲಿ ಸ್ವಸ್ಥಾನಕ್ಕೆ ತಲುಪಿತು. ಸುಮಾರು ನಾಲ್ಕು ತಾಸುಗಳ ಕಾಲ ರಥಬೀದಿ ಪಂಚ ರಥಗಳು ವಿರಾಜಮಾನವಾಗಿ ಸಾಗಿ ಭಕ್ತರ ಮನಸೂರೆಗೊಂಡವು. ಐದು ರಥಗಳು ರಥದ ಬೀದಿಗಳಲ್ಲಿ ಚಲಿಸುವಾಗ ರಸ್ತೆಯ ಇಕ್ಕೆಲಗಳಲ್ಲಿ ನೆರದಿದ್ದ ಲಕ್ಷಾಂತರ ಭಕ್ತರು ಹಣ್ಣು-ದವನ ಎಸೆದು ಹರಕೆ ತೀರಿಸಿದರು. ನವವಧುವರರು ಇಷ್ಟಾರ್ಥ ನೆರವೇರಿಸುವಂತೆ ಕೋರಿಕೊಂಡರು.

ಪ್ರಸಾದ ವಿನಿಯೋಗ: ಜಾತ್ರೆಗೆ ಬಂದ ಭಕ್ತರಿಗೆ ಹಲವು ಸೇವಾ ಸಂಘ ಸಂಸ್ಥೆಗಳ ಕಾರ್ಯಕರ್ತರು ದೇವಾಲಯದ ಆವರಣ, ರಥಬೀದಿ, ರಾಷ್ಟ್ರಪತಿ ರಸ್ತೆ, ಬಜಾರ್ ರಸ್ತೆ, ಎಂಜಿಎಸ್ ರಸ್ತೆಗಳಲ್ಲಿ ಉಪಾಹಾರ, ಹಣ್ಣುಹಂಪಲು, ಶುದ್ಧ ಕುಡಿಯುವ ನೀರು, ಮಜ್ಜಿಗೆ, ಪಾನಕ ನೀಡಿದರು. ಬೈಪಾಸ್‌ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು. ಸ್ನಾನಘಟ್ಟದಲ್ಲಿ ಸಾವಿರಾರು ಭಕ್ತರು ದೈವಕ್ಕೆ ಮುಡಿ ನೀಡಿ ಮಿಂದರು.

lokesh

Recent Posts

ರೈತರ ನಿದ್ದೆಗೆಡಿಸಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಕಿಕ್ಕೇರಿ: ಹೋಬಳಿಯ ಗೊಲ್ಲರಕೊಪ್ಪಲು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಳೆದ ಹಲವು ದಿನಗಳಿಂದ ರೈತರಿಗೆ ಆತಂಕ ಸೃಷ್ಟಿಸಿ ಜಾನುವಾರುಗಳು ಹಾಗೂ ಸಾಕು…

8 hours ago

ಶಿವಶಂಕರಪ್ಪ ಸಾಹುಕಾರ್‌ಗೆ ಹೊಸ ಕಾನೂನು ಸಂಕಷ್ಟ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಿದ ಬೆನ್ನಲ್ಲೇ ಈ ಹೊಸ ಕಾನೂನು ಸಂಕಷ್ಟ ಎದುರಾಗಿದೆ.…

11 hours ago

ಗೋಪಾಲಸ್ವಾಮಿ ಬೆಟ್ಟ: ಕೊನೆಗೂ ಭಕ್ತರಿಗೆ ಸಿಕ್ಕಿತು ನೆರಳು!

ಬೆಟ್ಟದಲ್ಲಿ ಬಸ್ ನಿಲ್ದಾಣದ ಉದ್ಘಾಟನೆ ನೆರವೇರಿಸಿದ ಶಾಸಕ; ಸಮಸ್ಯೆ ಕುರಿತು ಬೆಳಕು ಚೆಲ್ಲಿದ್ದ ‘ಆಂದೋಲನ’ ಗುಂಡ್ಲುಪೇಟೆ: ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ…

15 hours ago

ಓದುಗರ ಪತ್ರ: ಅಧ್ಯಾತ್ಮ ದುರಂತ!

ಅಧ್ಯಾತ್ಮ ದುರಂತ! ಲೌಕಿಕ ಬದುಕಿನ ಆಶೆ ಆಮಿಷಗಳ ಸೆರೆಮನೆಯಿಂದ ಬಿಡಿಸಿಕೊಳುವ ಸನ್ಮಾರ್ಗವನು ಅಧ್ಯಾತ್ಮವೆನ್ನುವರು ಪ್ರಾಜ್ಞರು! ಆದರೀಗ ಲೌಕಿಕದ ಆಶೆ ಆಮಿಷಗಳ…

18 hours ago

ಓದುಗರ ಪತ್ರ: ರಸ್ತೆ, ಉದ್ಯಾನಕ್ಕೆ ಎಸ್. ಜಾನಕಿ ಅವರ ಹೆಸರಿಡಿ

ಭಾರತೀಯ ಚಿತ್ರರಂಗದ ಗಾನಕೋಗಿಲೆ ಎಸ್.ಜಾನಕಿ ಅವರ ಸಾಧನೆ ಎಂದೆಂದಿಗೂ ಅಜರಾಮರ. ಅವರ ಹೆಸರನ್ನು ಮುಂದಿನ ಪೀಳಿಗೆಗೂ ಪರಿಚಯಿಸುವ ಮೂಲಕ ಚಿರಸ್ಥಾಯಿಯಾಗಿಸಲು…

19 hours ago

ಓದುಗರ ಪತ್ರ: ಚಾಮರಾಜಪುರಂನಲ್ಲಿ ರೈಲುಗಳ ನಿಲುಗಡೆಯಾಗಲಿ

ಮೈಸೂರಿನ ಅಶೋಕಪುರಂನಿಂದ ಚೆನ್ನೆ ಗೆ ತೆರಳುವ ಚೆನ್ನೆ ನಿಂದ - ಅಶೋಕಪುರಂಗೆ ಆಗಮಿಸುವ ೧೬೫೫೧ ಎಂಜಿಆರ್ ಚೆನ್ನೈಎಕ್ಸ್ ಪ್ರೆಸ್, ೨೦೬೨೪…

19 hours ago