ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್ ಆಗಿದೆ.
ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇನ್ನು ಹೆದ್ದಾರಿ ಬಂದ್ ಆಗಿರುವ ಕಾರಣ ಮೈಸೂರು ಊಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಮೈಸೂರಿನಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನಹುಂಡಿ, ಹೆಜ್ಜಿಗೆ ಮಾರ್ಗದ ಮೂಲಕ ನಂಜನಗೂಡು ಸಂಚರಿಸಲು ಸೂಚನೆ ನೀಡಲಾಗಿದೆ.
ಗುಂಡ್ಲುಪೇಟೆ, ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಪ್ರಯಾಣಿಕರಂತು ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.
ಮೈಸೂರು : ಕ್ರಿಸ್ಮಸ್ ಹಾಗೂ ಹೊಸ ವರ್ಷದ ಸಂಭ್ರಮಾಚರಣೆಗಾಗಿ ಪ್ರವಾಸಿಗರು, ಸ್ಥಳೀಯರಿಗೆ ಮನರಂಜನೆ ಒದಗಿಸಲು ಅರಮನೆ ಅಂಗಳದಲ್ಲಿ ಡಿ.೨೧ರಿಂದ ೩೧ರವರೆಗೆ…
ಮೈಸೂರು : ಮೈಸೂರಿನ ರೇಸ್ಕ್ಲಬ್ನ ಪ್ರದೇಶದ ಸುತ್ತಲಿನ ಎರಡು ಕಿ.ಮೀ ವ್ಯಾಪ್ತಿಯಲ್ಲಿ ಕುದುರೆ, ಕತ್ತೆ, ಹೇಸರಗತ್ತೆ ಪ್ರಾಣಿಗಳ ಚಲನವಲನ, ಕುದುರೆಗಳನ್ನು…
ಮೈಸೂರು : ಪ್ರತಿ ಜೀವ ಅಮೂಲ್ಯ, ರಸ್ತೆ ಅಪಘಾತಗಳ ಸಂಖ್ಯೆ ಶೂನ್ಯವಾಗುವುದು ಗುರಿಯಾಗಬೇಕು ಎಂದು ಸುಪ್ರೀಂ ಕೋಟ್೯ನ ನಿ.ನ್ಯಾಯಮೂರ್ತಿಯೂ ಆದ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಚೇರಿಗೆ ಬರುವಾಗ ಯೋಗ್ಯ ಸೂಕ್ತ ಬಟ್ಟೆ ಧರಿಸಿಕೊಂಡು ಬರದಿದ್ದರೆ ಸೂಕ್ತ ಕ್ರಮ ಎದುರಿಸಬೇಕಾಗುತ್ತದೆ…
ಮೈಸೂರು : ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ವಾತಾವರಣವನ್ನು ಸೃಷ್ಟಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಿಕೆ ಹಾಗೂ ವಿ.ವಿ ಕ್ಯಾಂಪಸ್ಗೆ ಅನಧಿಕೃತ…
ಬೆಂಗಳೂರು : ವಿಶೇಷ ಚೇತನರ ಬಗ್ಗೆ ಯಾರೂ ಕನಿಷ್ಠ ಭಾವನೆ ಹೊಂದಬೇಕಾಗಿಲ್ಲ. ಅವರಿಗೆ ದೇವರು ವಿಶೇಷವಾದ ಶಕ್ತಿಯನ್ನು ಕೊಟ್ಟಿರುತ್ತಾನೆ. ಹೀಗಾಗಿ…