ಮೈಸೂರು

ನಂಜನಗೂಡು-ಊಟಿ ರಾಷ್ಟ್ರೀಯ ಹೆದ್ದಾರಿ ಬಂದ್

ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್‌ ಆಗಿದೆ.

ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು,  ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇನ್ನು ಹೆದ್ದಾರಿ ಬಂದ್‌ ಆಗಿರುವ ಕಾರಣ ಮೈಸೂರು ಊಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ  ವ್ಯವಸ್ಥೆಯನ್ನು ಮಾಡಲಾಗಿದೆ. ಮೈಸೂರಿನಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನಹುಂಡಿ, ಹೆಜ್ಜಿಗೆ ಮಾರ್ಗದ ಮೂಲಕ ನಂಜನಗೂಡು ಸಂಚರಿಸಲು ಸೂಚನೆ ನೀಡಲಾಗಿದೆ.

ಗುಂಡ್ಲುಪೇಟೆ, ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಪ್ರಯಾಣಿಕರಂತು ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…

2 hours ago

ಓದುಗರ ಪತ್ರ: ಜನರ ನಿರೀಕ್ಷೆಗಳಿಂದ ದೂರವಾಗುತ್ತಿರುವ ಶಾಸನಸಭೆಗಳು

ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…

2 hours ago

ಓದುಗರ ಪತ್ರ: ಬೇಸರ ತರಿಸಿದ ಜನಪ್ರತಿನಿಧಿಗಳ ವರ್ತನೆ

ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…

2 hours ago

ಸೈನ್ಯ ಯುದ್ಧ ಮಾಡುತ್ತದೆ, ತೀರ್ಮಾನ ಸರ್ಕಾರ ಮಾಡಬೇಕು…!

ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…

2 hours ago

ಇಂದು ಶನಿವಾರಸಂತೆ ಬಸ್ ನಿಲ್ದಾಣ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…

2 hours ago

ಮಡಹಳ್ಳಿ ಬಳಿಯ ಅಕ್ರಮ ಕ್ರಷರ್‌ನಿಂದ ಜನತೆ ಹೈರಾಣ

ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…

2 hours ago