ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್ ಆಗಿದೆ.
ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇನ್ನು ಹೆದ್ದಾರಿ ಬಂದ್ ಆಗಿರುವ ಕಾರಣ ಮೈಸೂರು ಊಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಮೈಸೂರಿನಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನಹುಂಡಿ, ಹೆಜ್ಜಿಗೆ ಮಾರ್ಗದ ಮೂಲಕ ನಂಜನಗೂಡು ಸಂಚರಿಸಲು ಸೂಚನೆ ನೀಡಲಾಗಿದೆ.
ಗುಂಡ್ಲುಪೇಟೆ, ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಪ್ರಯಾಣಿಕರಂತು ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…