ಮೈಸೂರು : ಕಬಿನಿ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಜಲಾಶಯದಿಂದ ೭೦ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರಿಂದಾಗಿ ನಂಜನಗೂಡು ಬಳಿಯ ಮೈಸೂರು ಊಟಿ ರಸ್ತೆ ಬಂದ್ ಆಗಿದೆ.
ಚಿಕ್ಕಯ್ಯನ ಛತ್ರ ಗ್ರಾಮದಿಂದ ಮಲ್ಲನಮೂಲೆ ಮಠದ ವರೆಗೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.
ಇನ್ನು ಹೆದ್ದಾರಿ ಬಂದ್ ಆಗಿರುವ ಕಾರಣ ಮೈಸೂರು ಊಟಿ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳ ಮೂಲಕ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಮೈಸೂರಿನಿಂದ ನಂಜನಗೂಡು, ಗುಂಡ್ಲುಪೇಟೆ ಕಡೆ ಹೋಗುವ ವಾಹನಗಳು ತಾಂಡವಪುರದ ಬಳಿ ಎಡಕ್ಕೆ ತಿರುಗಿ ಕೆಂಪಿಸಿದ್ದನಹುಂಡಿ, ಹೆಜ್ಜಿಗೆ ಮಾರ್ಗದ ಮೂಲಕ ನಂಜನಗೂಡು ಸಂಚರಿಸಲು ಸೂಚನೆ ನೀಡಲಾಗಿದೆ.
ಗುಂಡ್ಲುಪೇಟೆ, ನಂಜನಗೂಡಿನಿಂದ ಮೈಸೂರಿಗೆ ಬರುವ ವಾಹನಗಳು ಕಲ್ಲಹಳ್ಳಿ ಗೊದ್ದನಪುರದ ಮೂಲಕ ಹೊಸ ಸೇತುವೆ ಮೂಲಕ ಹೋಗಲು ಸೂಚನೆ ನೀಡಲಾಗಿದೆ. ಇನ್ನು ಕೆಲವು ಪ್ರಯಾಣಿಕರಂತು ಬದಲಿ ಮಾರ್ಗ ಹುಡುಕಿಕೊಂಡು ಹೋಗಲು ಸಾಕಷ್ಟು ಪರದಾಟ ನಡೆಸುತ್ತಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…