ಮೈಸೂರು

ನಂಜನಗೂಡು ತಾಲೂಕು ಮಟ್ಟದ ಜನಸ್ಪಂದನ: 89 ಅರ್ಜಿ ಸ್ವೀಕಾರ, ವಾರದಲ್ಲಿ ಪರಿಹಾರ

ಮೈಸೂರು: ಅಲ್ಲಿ ಸಮಸ್ಯೆಗಳು ಅನಾವರಣಗೊಂಡಿದ್ದವು,ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿದ್ದರೆ, ಇನ್ನೊಂದಿಷ್ಟು ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ದೊರಕಿಸುವುದಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು.

ಅಧಿಕಾರಿಗಳು 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ರೈತರ ಹಾಗೂ ಸಾರ್ವಜನಿಕರ ಕುಂದು-ಕೊರತೆ ಸಭೆಯನ್ನು ಕಡ್ಡಾಯವಾಗಿ ನಡೆಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಬೇಕು. ಒಂದು ವೇಳೆ ಈ ವಿಷಯವಾಗಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಂಜನಗೂಡು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರುಗಳನ್ನು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.

ಪ್ರಮುಖವಾಗಿ ಕುಡಿಯುವ ನೀರು, ಚರಂಡಿ ದುರಸ್ಥಿ, ಸರ್ಕಾರಿ ಭೂಮಿ ಒತ್ತುವರಿ,ಸ್ಥಳೀಯರಿಗೆ ಉದ್ಯೋಗ,ಪುಟ್ಪಾತ್ ಅತಿಕ್ರಮಣ ತೆರವು,ಗೋಮಾಳ ತೆರವು ಇಂತಹ ಮೂಲಭೂತ ಸಮಸ್ಯೆಗಳು ಚರ್ಚೆಗೆ ಬಂದವು.

ರೈತ ಮುಖಂಡರೋರ್ವರು ದೂರು ನೀಡಿ, ತಾಲೂಕಿನ ಹಲವಾರು ಕಡೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ರೈತರು ದನ ಕರು ಮೇಯಿಸಲು ಗೋಮಾಳಗಳೇ ಮಾಯವಾಗಿವೆ. ಸರ್ಕಾರಿ ಜಮೀನನ್ನು ಸರ್ಕಾರ ವಶಪಡಿಸಿಕೊಂಡು, ಅರಣ್ಯ ಇಲಾಖೆ ಮುಖಾಂತರ ಗಿಡಗಳನ್ನು ಬೆಳೆಸಲಿ, ಈಗಾಗಲೇ ಅರ್ಜಿಕೊಟ್ಟು ಸಾಕಾಗಿದೆ, ಮುಂದಾದರೂ ಗಮನ ಹರಿಸಿ ಎಂದರು.

ಕಳಲೆ ಗ್ರಾಮದ ಮಾಜಿ ಸೈನಿಕರಾದ ಮಹೇಶ್ ಅರ್ಜಿ ನೀಡಿ, ಮಾಜಿ ಸೈನಿಕನಾದ ನನಗೆ ಜೀವನೋಪಾಯಕ್ಕಾಗಿ ಜಮೀನು ನೀಡಲು ಅವಕಾಶವಿದ್ದು, ಜಮೀನು ನೀಡಿ ಈಗಾಗಲೇ ಹತ್ತು ಬಾರಿ ದೂರು ನೀಡಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಮಾಜಿ ಸೈನಿಕರಿಗೆ ಗೌರವಯುತವಾಗಿ ನಡೆಸಿಕೊಳ್ಳುವುದು ಸರ್ಕಾರದ ಕರ್ತವ್ಯ ಹಾಗಾಗಿ ಈ ಬಗೆಗೆ ತಕ್ಷಣ ಗಮನ ಹರಿಸಲಾಗುವುದು ಎಂದರು.

ಪಕ್ಕದ ಮನೆಯವರಿಗೆ ಡೆಂಗ್ಯು : ನಂಜನಗೂಡು ನಗರದ ನಾಗರೀಕರೋರ್ವರು ದೂರು ನೀಡಿ, ನಮ್ಮ ಬಡಾವಣೆಯ ಚರಂಡಿಗಳು ಹೂಳು ತುಂಬಿಕೊಂಡಿದ್ದು, ಸ್ವಚ್ಚ ಮಾಡಿ ವರ್ಷಗಳೇ ಕಳೆದಿವೆ, ನಮ್ಮ ಪಕ್ಕದ ಮನೆಯವರಿಗೆ ಡೆಂಗ್ಯೂ ಬಂದಿದೆ ಎಂದಾಗ ಜಿಲ್ಲಾಧಿಕಾರಿಗಳು ಈ ದಿನ ಸಂಜೆಯೊಳಗೆ ಸ್ವಚ್ಚ ಮಾಡಬೇಕೆಂದು ತಾಕೀತು ಮಾಡಿದರು.

ರೈತ ಸಂಘದ ಮುಖಂಡರು ಅರ್ಜಿ ನೀಡಿ, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ನೀಡುವುದಾಗಿ ಹೇಳಿ ಉದ್ಯೋಗ ನೀಡಿರುವುದಿಲ್ಲ, ಹೊಸಕೋಟೆಯಲ್ಲಿ ಇಂತಹ ಪ್ರಕರಣಗಳಲ್ಲಿ ಉದ್ಯೋಗ ನೀಡಿದ್ದಾರೆ.ಅದರಂತೆ ನಮ್ಮಲ್ಲಿಯೂ ಉದ್ಯೋಗ ನೀಡಬೇಕೆಂದರು.

ಮುಂಬರುವ ದಿನಗಳಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ಇರುವ ಸ್ಥಳಕ್ಕೆ ಖುದ್ದಾಗಿ ಭೇಟಿನೀಡಿ ಸಾರ್ವಜನಿಕರಿಗೆ ಸ್ಪಂದಿಸಿ, ತಕ್ಷಣವೇ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಖಾಲಿ ಕೆರೆಗಳಿಗೆ ನೀರು ತುಂಬಿಸಿ ಅವಶ್ಯ ನಾಲೆಗಳಿಗೆ ನೀರು ಬಿಡುವಂತೆ ಸೂಚಿಸಿ. ಕುಡಿಯುವ ನೀರಿನ ಸಮಸ್ಯೆ ಹಾಗೂ ಆರೋಗ್ಯದ ಸಮಸ್ಯೆಗಳಿಗೆ ಆದಷ್ಟು ಬೇಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಂದಾಯ ಇಲಾಖೆಯ ಇ-ಆಫೀಸ್ ನ ತಾಂತ್ರಿಕ ಸಮಸ್ಯೆಯಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಗೆ ಒತ್ತುಕೊಟ್ಟು ಶೀಘ್ರವೇ ಪರಿಹರಿಸಿ, ಜನರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು, ನಂಜನಗೂಡು ತಾಲೂಕಿನ ತಹಶೀಲ್ದಾರರಾದ ಶಿವಮೂರ್ತಿ ಸೇರಿದಂತೆ ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

53 seconds ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

12 mins ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

21 mins ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

36 mins ago

ವಿಶ್ವದ 2ನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜ ಅನಾವರಣಗೊಳಿಸಿದ ಸಿಎಂ

ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು.…

1 hour ago

ನಟ ರಿಷಬ್‌ ಶೆಟ್ಟಿ ತೊಡೆ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ: ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ

ಬೆಂಗಳೂರು: ಇತ್ತೀಚೆಗೆ ಮಂಗಳೂರಿನಲ್ಲಿ ಹರಕೆ ಕೋಲಾ ಮಾಡಿಸಿದ್ದ ರಿಷಬ್‌ ಶೆಟ್ಟಿ ತೊಡೆ ಮೇಲೆ ದೈವಾರಾಧಕ ಮಲಗಿದ್ದು ಭಾರೀ ಚರ್ಚೆಗೆ ಕಾರಣವಾಗಿದೆ.…

1 hour ago