ಮೈಸೂರು

ನಂಜನಗೂಡು ತಾಲೂಕು ಮಟ್ಟದ ಜನಸ್ಪಂದನ: 89 ಅರ್ಜಿ ಸ್ವೀಕಾರ, ವಾರದಲ್ಲಿ ಪರಿಹಾರ

ಮೈಸೂರು: ಅಲ್ಲಿ ಸಮಸ್ಯೆಗಳು ಅನಾವರಣಗೊಂಡಿದ್ದವು,ಕೆಲ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿದ್ದರೆ, ಇನ್ನೊಂದಿಷ್ಟು ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರ ದೊರಕಿಸುವುದಾಗಿ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಭರವಸೆ ನೀಡಿದರು.

ಅಧಿಕಾರಿಗಳು 3 ತಿಂಗಳಿಗೊಮ್ಮೆ ತಾಲೂಕು ಮಟ್ಟದಲ್ಲಿ ರೈತರ ಹಾಗೂ ಸಾರ್ವಜನಿಕರ ಕುಂದು-ಕೊರತೆ ಸಭೆಯನ್ನು ಕಡ್ಡಾಯವಾಗಿ ನಡೆಸಿ ಅವರಿಂದ ಅಹವಾಲುಗಳನ್ನು ಸ್ವೀಕರಿಸಿ ಸಮಸ್ಯೆಗಳಿಗೆ ತ್ವರಿತವಾಗಿ ಪರಿಹಾರ ನೀಡಬೇಕು. ಒಂದು ವೇಳೆ ಈ ವಿಷಯವಾಗಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಂಜನಗೂಡು ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ದೂರುಗಳನ್ನು ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.

ಪ್ರಮುಖವಾಗಿ ಕುಡಿಯುವ ನೀರು, ಚರಂಡಿ ದುರಸ್ಥಿ, ಸರ್ಕಾರಿ ಭೂಮಿ ಒತ್ತುವರಿ,ಸ್ಥಳೀಯರಿಗೆ ಉದ್ಯೋಗ,ಪುಟ್ಪಾತ್ ಅತಿಕ್ರಮಣ ತೆರವು,ಗೋಮಾಳ ತೆರವು ಇಂತಹ ಮೂಲಭೂತ ಸಮಸ್ಯೆಗಳು ಚರ್ಚೆಗೆ ಬಂದವು.

ರೈತ ಮುಖಂಡರೋರ್ವರು ದೂರು ನೀಡಿ, ತಾಲೂಕಿನ ಹಲವಾರು ಕಡೆ ಸರ್ಕಾರಿ ಭೂಮಿ ಒತ್ತುವರಿಯಾಗಿದ್ದು, ರೈತರು ದನ ಕರು ಮೇಯಿಸಲು ಗೋಮಾಳಗಳೇ ಮಾಯವಾಗಿವೆ. ಸರ್ಕಾರಿ ಜಮೀನನ್ನು ಸರ್ಕಾರ ವಶಪಡಿಸಿಕೊಂಡು, ಅರಣ್ಯ ಇಲಾಖೆ ಮುಖಾಂತರ ಗಿಡಗಳನ್ನು ಬೆಳೆಸಲಿ, ಈಗಾಗಲೇ ಅರ್ಜಿಕೊಟ್ಟು ಸಾಕಾಗಿದೆ, ಮುಂದಾದರೂ ಗಮನ ಹರಿಸಿ ಎಂದರು.

ಕಳಲೆ ಗ್ರಾಮದ ಮಾಜಿ ಸೈನಿಕರಾದ ಮಹೇಶ್ ಅರ್ಜಿ ನೀಡಿ, ಮಾಜಿ ಸೈನಿಕನಾದ ನನಗೆ ಜೀವನೋಪಾಯಕ್ಕಾಗಿ ಜಮೀನು ನೀಡಲು ಅವಕಾಶವಿದ್ದು, ಜಮೀನು ನೀಡಿ ಈಗಾಗಲೇ ಹತ್ತು ಬಾರಿ ದೂರು ನೀಡಿದ್ದೇನೆ ಎಂದರು.

ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಮಾಜಿ ಸೈನಿಕರಿಗೆ ಗೌರವಯುತವಾಗಿ ನಡೆಸಿಕೊಳ್ಳುವುದು ಸರ್ಕಾರದ ಕರ್ತವ್ಯ ಹಾಗಾಗಿ ಈ ಬಗೆಗೆ ತಕ್ಷಣ ಗಮನ ಹರಿಸಲಾಗುವುದು ಎಂದರು.

ಪಕ್ಕದ ಮನೆಯವರಿಗೆ ಡೆಂಗ್ಯು : ನಂಜನಗೂಡು ನಗರದ ನಾಗರೀಕರೋರ್ವರು ದೂರು ನೀಡಿ, ನಮ್ಮ ಬಡಾವಣೆಯ ಚರಂಡಿಗಳು ಹೂಳು ತುಂಬಿಕೊಂಡಿದ್ದು, ಸ್ವಚ್ಚ ಮಾಡಿ ವರ್ಷಗಳೇ ಕಳೆದಿವೆ, ನಮ್ಮ ಪಕ್ಕದ ಮನೆಯವರಿಗೆ ಡೆಂಗ್ಯೂ ಬಂದಿದೆ ಎಂದಾಗ ಜಿಲ್ಲಾಧಿಕಾರಿಗಳು ಈ ದಿನ ಸಂಜೆಯೊಳಗೆ ಸ್ವಚ್ಚ ಮಾಡಬೇಕೆಂದು ತಾಕೀತು ಮಾಡಿದರು.

ರೈತ ಸಂಘದ ಮುಖಂಡರು ಅರ್ಜಿ ನೀಡಿ, ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಗೆ ಭೂಮಿ ನೀಡಿದ ರೈತರ ಕುಟುಂಬಗಳಿಗೆ ಉದ್ಯೋಗ ನೀಡುವುದಾಗಿ ಹೇಳಿ ಉದ್ಯೋಗ ನೀಡಿರುವುದಿಲ್ಲ, ಹೊಸಕೋಟೆಯಲ್ಲಿ ಇಂತಹ ಪ್ರಕರಣಗಳಲ್ಲಿ ಉದ್ಯೋಗ ನೀಡಿದ್ದಾರೆ.ಅದರಂತೆ ನಮ್ಮಲ್ಲಿಯೂ ಉದ್ಯೋಗ ನೀಡಬೇಕೆಂದರು.

ಮುಂಬರುವ ದಿನಗಳಲ್ಲಿ ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಸಮಸ್ಯೆ ಇರುವ ಸ್ಥಳಕ್ಕೆ ಖುದ್ದಾಗಿ ಭೇಟಿನೀಡಿ ಸಾರ್ವಜನಿಕರಿಗೆ ಸ್ಪಂದಿಸಿ, ತಕ್ಷಣವೇ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಖಾಲಿ ಕೆರೆಗಳಿಗೆ ನೀರು ತುಂಬಿಸಿ ಅವಶ್ಯ ನಾಲೆಗಳಿಗೆ ನೀರು ಬಿಡುವಂತೆ ಸೂಚಿಸಿ. ಕುಡಿಯುವ ನೀರಿನ ಸಮಸ್ಯೆ ಹಾಗೂ ಆರೋಗ್ಯದ ಸಮಸ್ಯೆಗಳಿಗೆ ಆದಷ್ಟು ಬೇಗ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಕಂದಾಯ ಇಲಾಖೆಯ ಇ-ಆಫೀಸ್ ನ ತಾಂತ್ರಿಕ ಸಮಸ್ಯೆಯಿಂದ ಸಾರ್ವಜನಿಕರ ಕೆಲಸಗಳು ವಿಳಂಬವಾಗುತ್ತಿರುವುದರಿಂದ ಕಂದಾಯ ಇಲಾಖೆಯ ಅಧಿಕಾರಿಗಳು ಈ ಸಮಸ್ಯೆಗೆ ಒತ್ತುಕೊಟ್ಟು ಶೀಘ್ರವೇ ಪರಿಹರಿಸಿ, ಜನರಿಗೆ ಅನುಕೂಲವಾಗುವಂತೆ ಮಾಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ, ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ ಶಿವರಾಜು, ನಂಜನಗೂಡು ತಾಲೂಕಿನ ತಹಶೀಲ್ದಾರರಾದ ಶಿವಮೂರ್ತಿ ಸೇರಿದಂತೆ ಇನ್ನಿತರ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

23 mins ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

26 mins ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

27 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

30 mins ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

32 mins ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

34 mins ago