ನಂಜನಗೂಡು: ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ.
ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಂಜನಗೂಡಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ನೀಲಕಂಠ ನಗರ ಬಡಾವಣೆಯ ಹಲವಾರು ಮನೆಯ ಗೋಡೆಗಳು ಶಿಥಿಲಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ವಸ್ತುಗಳಿಗೆಲ್ಲ ಹಾನಿ ಉಂಟಾಗಿದ್ದು ರಾತ್ರಿ ಇಡೀ ನಿದ್ರೆ ಇಲ್ಲದೇ ಮನೆಯ ಮಾಲೀಕರು ಮಳೆಯ ನೀರನ್ನು ಹೊರಗೆ ಹಾಕುತ್ತಿರುವುದು ಕಂಡುಬಂತು.
ಶಾಲೆಗೆ ನುಗ್ಗಿದ ನೀರು : ಸಿಂಧುವಳ್ಳಿ ಗ್ರಾಮದ ಪಕ್ಕದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯನ್ನು ನೀಡಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮೂಕನಕಟ್ಟೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಭೋಜನಾಲಯ ಬಾಲಕರ ವಸತಿ ನಿಲಯ ಹಾಗೂ ಶೌಚಾಲಯಗಳಲ್ಲಿ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದ್ದು ತಾಲ್ಲೂಕಿನ ವಿವಿಧೆಡೆ ಹಲವು ಶಾಲೆಗಳು ಮತ್ತು ಅಂಗನವಾಡಿಗಳ ಗೋಡೆಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…