ನಂಜನಗೂಡು: ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ.
ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಂಜನಗೂಡಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ನೀಲಕಂಠ ನಗರ ಬಡಾವಣೆಯ ಹಲವಾರು ಮನೆಯ ಗೋಡೆಗಳು ಶಿಥಿಲಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ವಸ್ತುಗಳಿಗೆಲ್ಲ ಹಾನಿ ಉಂಟಾಗಿದ್ದು ರಾತ್ರಿ ಇಡೀ ನಿದ್ರೆ ಇಲ್ಲದೇ ಮನೆಯ ಮಾಲೀಕರು ಮಳೆಯ ನೀರನ್ನು ಹೊರಗೆ ಹಾಕುತ್ತಿರುವುದು ಕಂಡುಬಂತು.
ಶಾಲೆಗೆ ನುಗ್ಗಿದ ನೀರು : ಸಿಂಧುವಳ್ಳಿ ಗ್ರಾಮದ ಪಕ್ಕದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯನ್ನು ನೀಡಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮೂಕನಕಟ್ಟೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಭೋಜನಾಲಯ ಬಾಲಕರ ವಸತಿ ನಿಲಯ ಹಾಗೂ ಶೌಚಾಲಯಗಳಲ್ಲಿ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದ್ದು ತಾಲ್ಲೂಕಿನ ವಿವಿಧೆಡೆ ಹಲವು ಶಾಲೆಗಳು ಮತ್ತು ಅಂಗನವಾಡಿಗಳ ಗೋಡೆಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…