ಮೈಸೂರು

ನಿರಂತರ ಮಳೆಯಿಂದಾಗಿ ನಂಜನಗೂಡು ತತ್ತರ

ನಂಜನಗೂಡು: ಸತತವಾಗಿ  ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ  ಅಕ್ಷರಶಃ  ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ.

ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಂಜನಗೂಡಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ನೀಲಕಂಠ ನಗರ ಬಡಾವಣೆಯ ಹಲವಾರು ಮನೆಯ ಗೋಡೆಗಳು ಶಿಥಿಲಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ವಸ್ತುಗಳಿಗೆಲ್ಲ ಹಾನಿ ಉಂಟಾಗಿದ್ದು ರಾತ್ರಿ ಇಡೀ ನಿದ್ರೆ ಇಲ್ಲದೇ ಮನೆಯ ಮಾಲೀಕರು ಮಳೆಯ ನೀರನ್ನು ಹೊರಗೆ ಹಾಕುತ್ತಿರುವುದು ಕಂಡುಬಂತು.

ಶಾಲೆಗೆ ನುಗ್ಗಿದ ನೀರು : ಸಿಂಧುವಳ್ಳಿ ಗ್ರಾಮದ ಪಕ್ಕದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯನ್ನು ನೀಡಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮೂಕನಕಟ್ಟೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಭೋಜನಾಲಯ ಬಾಲಕರ ವಸತಿ ನಿಲಯ ಹಾಗೂ ಶೌಚಾಲಯಗಳಲ್ಲಿ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದ್ದು ತಾಲ್ಲೂಕಿನ ವಿವಿಧೆಡೆ ಹಲವು ಶಾಲೆಗಳು ಮತ್ತು ಅಂಗನವಾಡಿಗಳ ಗೋಡೆಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

1 hour ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago