ನಂಜನಗೂಡು: ಸತತವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿದ ಭಾರಿ ನಂಜನಗೂಡಿನ ಜನತೆ ಅಕ್ಷರಶಃ ನಲುಗಿ ಹೋಗಿದ್ದಾರೆ. ಹಳ್ಳ, ಕೊಳ್ಳ, ಕೆರೆ, ಕಟ್ಟೆಗಳು ತುಂಬಿ ಹರಿಯುತ್ತಿದೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ, ಮನೆಗಳು ಕುಸಿದು ಜನರ ಬದುಕು ಚಿಂತಾಜನಕವಾಗಿದೆ.
ರಾಜ್ಯಾದ್ಯಂತ ನಿರಂತರವಾಗಿ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ ನಂಜನಗೂಡಿನ ಪಟ್ಟಣ ಮತ್ತು ಗ್ರಾಮಾಂತರ ಪ್ರದೇಶದ ಜನತೆ ಶೋಚನೀಯ ಸ್ಥಿತಿ ತಲುಪಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಪಟ್ಟಣದ ನೀಲಕಂಠ ನಗರ ಬಡಾವಣೆಯ ಹಲವಾರು ಮನೆಯ ಗೋಡೆಗಳು ಶಿಥಿಲಗೊಂಡಿದೆ. ಮನೆಗಳಿಗೆ ನೀರು ನುಗ್ಗಿ ವಸ್ತುಗಳಿಗೆಲ್ಲ ಹಾನಿ ಉಂಟಾಗಿದ್ದು ರಾತ್ರಿ ಇಡೀ ನಿದ್ರೆ ಇಲ್ಲದೇ ಮನೆಯ ಮಾಲೀಕರು ಮಳೆಯ ನೀರನ್ನು ಹೊರಗೆ ಹಾಕುತ್ತಿರುವುದು ಕಂಡುಬಂತು.
ಶಾಲೆಗೆ ನುಗ್ಗಿದ ನೀರು : ಸಿಂಧುವಳ್ಳಿ ಗ್ರಾಮದ ಪಕ್ಕದಲ್ಲಿರುವ ಮೊರಾರ್ಜಿ ದೇಸಾಯಿ ಶಾಲೆಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಶಾಲೆಗೆ ರಜೆಯನ್ನು ನೀಡಲಾಗಿತ್ತು. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಮೂಕನಕಟ್ಟೆ ಕೆರೆ ಸಂಪೂರ್ಣವಾಗಿ ಭರ್ತಿಯಾಗಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ಶಾಲೆಯ ಭೋಜನಾಲಯ ಬಾಲಕರ ವಸತಿ ನಿಲಯ ಹಾಗೂ ಶೌಚಾಲಯಗಳಲ್ಲಿ ನೀರು ನುಗ್ಗಿ ಅವಾಂತರವನ್ನು ಸೃಷ್ಟಿ ಮಾಡಿದ್ದು ತಾಲ್ಲೂಕಿನ ವಿವಿಧೆಡೆ ಹಲವು ಶಾಲೆಗಳು ಮತ್ತು ಅಂಗನವಾಡಿಗಳ ಗೋಡೆಗಳು ಶಿಥಿಲ ವ್ಯವಸ್ಥೆಯಿಂದ ಕೂಡಿದೆ.
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…
ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…
ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…