Mysore
21
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು.

ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು.

ದೇವಾಲಯದ ಆವರಣ ಸ್ನಾನಘಟ್ಟದ ರಸ್ತೆ ಸೇರಿದಂತೆ ಬೇಕಾ ಬಿಟ್ಟಿಯಾಗಿ ಇಡಲಾಗಿದ್ದ ಎಲ್ಲ ಅಂಗಡಿಗಳನ್ನೂ ಇಂದು ತೆರವು ಗೊಳಿಸಲಾಗಿದ್ದು ನಾಳೆಯೂ ತೆರವು ಮುಂದುವರಿಯುವದು ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಇದೇ ರೀತಿ ಇದೇ ಜಾಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು.

ಅದಾದ ಕೆಲವು ದಿನಗಳ ನಂತರ ಒಬ್ಬರ ಮೇಲೋಬ್ಬರು ಪೈಪೋಟಿಗೆ ಬಿದ್ದವರಂತೆ ಸಾಕಷ್ಠು ಅಂಗಡಿಗಳು ರಾತ್ರಿ ಬೇಳಗಾಗುವದರೊಳಗೆ ತಲೆ ಎತ್ತಿ ಅನಧಿಕೃತವಾಗಿ ಇಲ್ಲಿ ವ್ಯಾಪಾರ ಮಾಡುತ್ತಿದ್ದವು. ಈ ಅಂಗಡಿಗಳಿಂದಾಗಿ ದೇವಾಲಯಕ್ಕೆ ಆಗಮಿಸುವವರಿಗೆ ಕಿರಿಕಿರಿಯಾಗುವ ದೂರುಗಳು ಫುಂಖಾನು ಫುಂಖವಾಗಿ ಬಂದರೂ ದೇವಾಲಯದ ಆಡಳಿತ ಮಾತ್ರಕಣ್ಣಿದ್ದು ಕುರಡನಂತೆ ವರ್ತಿಸುತ್ತಿತ್ತು. ಕಳೆದ ವಾರ ಶಾಸಕ ದರ್ಶನ್‌ದ್ರುವನಾರಾಯಣ ಇಲ್ಲಿಗೆ ಭೇಟಿ ನೀಡಿದಾಗ ಈ ದೂರುಗಳನ್ನು ಪರಿಶಿಲಿಸಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿರುವ ಅನಧಿಕೃತ ವ್ಯಾಪಾರ ಹಾಗೂ ಅಂಗಡಿಗಳ ಕುರಿತಂತೆ ಕಿಡಿಕಾರಿದ್ದರು ಅದಾದ ಒಂದೇ ವಾರದಲ್ಲಿ ಅಂಗಡಿಗಳ ತೆರವು ಕಾರ್ಯ ಆರಂಭವಾಗಿದೆ.

ಅಂಗಡಿಗಳ ತೆರವು ನಂಜನಗೂಡಿನ ಪಾಲಿಗೆ ಕಣ್ಣುಮುಚ್ಚಾಲೆಯಾಟ ಎಂದವರು ಇಲ್ಲಿನ ಸಾರ್ವಜನಿಕರು . ಕಳೆದ ತಿಂಗಳು ನಂಜನಗೂಡಿನ ರಾಷ್ರö್ಠಪತಿರಸ್ತೆ ಮಹಾತ್ಮಾಗಾಂಧಿ ಶತಾಬ್ದಿರಸ್ತೆ, ನೆಹರು ವೃತ್ತ ,ಅಂಗಡಿ ಬೀದಿಗಳ ಫುಟ್ ಪಾತ್ ಗಳ ವತ್ತುವರಿತೆರವಾಗಿತ್ತು. ಆಗ ತೆರವಾದ ಅಂಗಡಿಗಳೂ ಈಗ ಮತ್ತೇ ಪೈಪೋಟಿಗೆ ಬಿದ್ದವರಂತೆ ಪಾದಚಾರಿ ಮಾರ್ಗವನ್ನು ವತ್ತುವರಿ ಮಾಡಿಯಥಾ ಸ್ಥಾನದಲ್ಲಿತಮ್ಮ ವ್ಯಾಪಾರ ಮುಂದುವರಿಸಿದ್ದು ನಂಜನಗೂಡಿನ ವತ್ತುವರಿ ತೆರವು ಎಂದರೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳ ಪಾಲಿಗೆ ಕಣ್ಣುಮಚ್ಚಾಲೆ ಆಟದಂತಾಗಿದೆ ಎಂದ ಯೋಗೀಶ ಈ ವತ್ತುವರಿ ಹಾಗಾಗದಿರಲಿ ಮತ್ತೇ ಇಲ್ಲಿ ಅನಧಿಕೃತ ವ್ಯಾಪಾರ ಆರಂಭವಾಗದಿರಲಿ ಎಂದರು.

Tags:
error: Content is protected !!