ಮೈಸೂರು

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು.

ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು.

ದೇವಾಲಯದ ಆವರಣ ಸ್ನಾನಘಟ್ಟದ ರಸ್ತೆ ಸೇರಿದಂತೆ ಬೇಕಾ ಬಿಟ್ಟಿಯಾಗಿ ಇಡಲಾಗಿದ್ದ ಎಲ್ಲ ಅಂಗಡಿಗಳನ್ನೂ ಇಂದು ತೆರವು ಗೊಳಿಸಲಾಗಿದ್ದು ನಾಳೆಯೂ ತೆರವು ಮುಂದುವರಿಯುವದು ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಇದೇ ರೀತಿ ಇದೇ ಜಾಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು.

ಅದಾದ ಕೆಲವು ದಿನಗಳ ನಂತರ ಒಬ್ಬರ ಮೇಲೋಬ್ಬರು ಪೈಪೋಟಿಗೆ ಬಿದ್ದವರಂತೆ ಸಾಕಷ್ಠು ಅಂಗಡಿಗಳು ರಾತ್ರಿ ಬೇಳಗಾಗುವದರೊಳಗೆ ತಲೆ ಎತ್ತಿ ಅನಧಿಕೃತವಾಗಿ ಇಲ್ಲಿ ವ್ಯಾಪಾರ ಮಾಡುತ್ತಿದ್ದವು. ಈ ಅಂಗಡಿಗಳಿಂದಾಗಿ ದೇವಾಲಯಕ್ಕೆ ಆಗಮಿಸುವವರಿಗೆ ಕಿರಿಕಿರಿಯಾಗುವ ದೂರುಗಳು ಫುಂಖಾನು ಫುಂಖವಾಗಿ ಬಂದರೂ ದೇವಾಲಯದ ಆಡಳಿತ ಮಾತ್ರಕಣ್ಣಿದ್ದು ಕುರಡನಂತೆ ವರ್ತಿಸುತ್ತಿತ್ತು. ಕಳೆದ ವಾರ ಶಾಸಕ ದರ್ಶನ್‌ದ್ರುವನಾರಾಯಣ ಇಲ್ಲಿಗೆ ಭೇಟಿ ನೀಡಿದಾಗ ಈ ದೂರುಗಳನ್ನು ಪರಿಶಿಲಿಸಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿರುವ ಅನಧಿಕೃತ ವ್ಯಾಪಾರ ಹಾಗೂ ಅಂಗಡಿಗಳ ಕುರಿತಂತೆ ಕಿಡಿಕಾರಿದ್ದರು ಅದಾದ ಒಂದೇ ವಾರದಲ್ಲಿ ಅಂಗಡಿಗಳ ತೆರವು ಕಾರ್ಯ ಆರಂಭವಾಗಿದೆ.

ಅಂಗಡಿಗಳ ತೆರವು ನಂಜನಗೂಡಿನ ಪಾಲಿಗೆ ಕಣ್ಣುಮುಚ್ಚಾಲೆಯಾಟ ಎಂದವರು ಇಲ್ಲಿನ ಸಾರ್ವಜನಿಕರು . ಕಳೆದ ತಿಂಗಳು ನಂಜನಗೂಡಿನ ರಾಷ್ರö್ಠಪತಿರಸ್ತೆ ಮಹಾತ್ಮಾಗಾಂಧಿ ಶತಾಬ್ದಿರಸ್ತೆ, ನೆಹರು ವೃತ್ತ ,ಅಂಗಡಿ ಬೀದಿಗಳ ಫುಟ್ ಪಾತ್ ಗಳ ವತ್ತುವರಿತೆರವಾಗಿತ್ತು. ಆಗ ತೆರವಾದ ಅಂಗಡಿಗಳೂ ಈಗ ಮತ್ತೇ ಪೈಪೋಟಿಗೆ ಬಿದ್ದವರಂತೆ ಪಾದಚಾರಿ ಮಾರ್ಗವನ್ನು ವತ್ತುವರಿ ಮಾಡಿಯಥಾ ಸ್ಥಾನದಲ್ಲಿತಮ್ಮ ವ್ಯಾಪಾರ ಮುಂದುವರಿಸಿದ್ದು ನಂಜನಗೂಡಿನ ವತ್ತುವರಿ ತೆರವು ಎಂದರೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳ ಪಾಲಿಗೆ ಕಣ್ಣುಮಚ್ಚಾಲೆ ಆಟದಂತಾಗಿದೆ ಎಂದ ಯೋಗೀಶ ಈ ವತ್ತುವರಿ ಹಾಗಾಗದಿರಲಿ ಮತ್ತೇ ಇಲ್ಲಿ ಅನಧಿಕೃತ ವ್ಯಾಪಾರ ಆರಂಭವಾಗದಿರಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

7 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

7 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

9 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

11 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

12 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

12 hours ago