ಮೈಸೂರು

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು.

ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು.

ದೇವಾಲಯದ ಆವರಣ ಸ್ನಾನಘಟ್ಟದ ರಸ್ತೆ ಸೇರಿದಂತೆ ಬೇಕಾ ಬಿಟ್ಟಿಯಾಗಿ ಇಡಲಾಗಿದ್ದ ಎಲ್ಲ ಅಂಗಡಿಗಳನ್ನೂ ಇಂದು ತೆರವು ಗೊಳಿಸಲಾಗಿದ್ದು ನಾಳೆಯೂ ತೆರವು ಮುಂದುವರಿಯುವದು ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಇದೇ ರೀತಿ ಇದೇ ಜಾಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು.

ಅದಾದ ಕೆಲವು ದಿನಗಳ ನಂತರ ಒಬ್ಬರ ಮೇಲೋಬ್ಬರು ಪೈಪೋಟಿಗೆ ಬಿದ್ದವರಂತೆ ಸಾಕಷ್ಠು ಅಂಗಡಿಗಳು ರಾತ್ರಿ ಬೇಳಗಾಗುವದರೊಳಗೆ ತಲೆ ಎತ್ತಿ ಅನಧಿಕೃತವಾಗಿ ಇಲ್ಲಿ ವ್ಯಾಪಾರ ಮಾಡುತ್ತಿದ್ದವು. ಈ ಅಂಗಡಿಗಳಿಂದಾಗಿ ದೇವಾಲಯಕ್ಕೆ ಆಗಮಿಸುವವರಿಗೆ ಕಿರಿಕಿರಿಯಾಗುವ ದೂರುಗಳು ಫುಂಖಾನು ಫುಂಖವಾಗಿ ಬಂದರೂ ದೇವಾಲಯದ ಆಡಳಿತ ಮಾತ್ರಕಣ್ಣಿದ್ದು ಕುರಡನಂತೆ ವರ್ತಿಸುತ್ತಿತ್ತು. ಕಳೆದ ವಾರ ಶಾಸಕ ದರ್ಶನ್‌ದ್ರುವನಾರಾಯಣ ಇಲ್ಲಿಗೆ ಭೇಟಿ ನೀಡಿದಾಗ ಈ ದೂರುಗಳನ್ನು ಪರಿಶಿಲಿಸಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿರುವ ಅನಧಿಕೃತ ವ್ಯಾಪಾರ ಹಾಗೂ ಅಂಗಡಿಗಳ ಕುರಿತಂತೆ ಕಿಡಿಕಾರಿದ್ದರು ಅದಾದ ಒಂದೇ ವಾರದಲ್ಲಿ ಅಂಗಡಿಗಳ ತೆರವು ಕಾರ್ಯ ಆರಂಭವಾಗಿದೆ.

ಅಂಗಡಿಗಳ ತೆರವು ನಂಜನಗೂಡಿನ ಪಾಲಿಗೆ ಕಣ್ಣುಮುಚ್ಚಾಲೆಯಾಟ ಎಂದವರು ಇಲ್ಲಿನ ಸಾರ್ವಜನಿಕರು . ಕಳೆದ ತಿಂಗಳು ನಂಜನಗೂಡಿನ ರಾಷ್ರö್ಠಪತಿರಸ್ತೆ ಮಹಾತ್ಮಾಗಾಂಧಿ ಶತಾಬ್ದಿರಸ್ತೆ, ನೆಹರು ವೃತ್ತ ,ಅಂಗಡಿ ಬೀದಿಗಳ ಫುಟ್ ಪಾತ್ ಗಳ ವತ್ತುವರಿತೆರವಾಗಿತ್ತು. ಆಗ ತೆರವಾದ ಅಂಗಡಿಗಳೂ ಈಗ ಮತ್ತೇ ಪೈಪೋಟಿಗೆ ಬಿದ್ದವರಂತೆ ಪಾದಚಾರಿ ಮಾರ್ಗವನ್ನು ವತ್ತುವರಿ ಮಾಡಿಯಥಾ ಸ್ಥಾನದಲ್ಲಿತಮ್ಮ ವ್ಯಾಪಾರ ಮುಂದುವರಿಸಿದ್ದು ನಂಜನಗೂಡಿನ ವತ್ತುವರಿ ತೆರವು ಎಂದರೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳ ಪಾಲಿಗೆ ಕಣ್ಣುಮಚ್ಚಾಲೆ ಆಟದಂತಾಗಿದೆ ಎಂದ ಯೋಗೀಶ ಈ ವತ್ತುವರಿ ಹಾಗಾಗದಿರಲಿ ಮತ್ತೇ ಇಲ್ಲಿ ಅನಧಿಕೃತ ವ್ಯಾಪಾರ ಆರಂಭವಾಗದಿರಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

3 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

4 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

5 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

6 hours ago

ಜೂನ್.‌19ಕ್ಕೆ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಓಪನ್:‌ ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್‌ ಮತ್ತು ಅಮೇರಿಕಾ ನಡುವಿನ ಒಪ್ಪಂದ್‌ ನಂತರ ಶುಕ್ರವಾರದಿಂದ ಹಾರ್ಮುಜ್‌ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…

7 hours ago

ಓದುಗರ ಪತ್ರ: ಒಡಿಶಾ: ಉಚಿತ ಶಿಕ್ಷಣ ಶ್ಲಾಘನೀಯ

ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…

10 hours ago