ಮೈಸೂರು

ನಂಜನಗೂಡು | ಶ್ರೀಕಂಠೇಶ್ವರ ದೇವಾಲಯದ ಮುಂದಿನ ಅನಧಿಕೃತ ಅಂಗಡಿ ತೆರವು

ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು.

ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ ಕೃಷ್ಣ ನೇತ್ರತ್ವದಲ್ಲಿ ಪೊಲಿಸರ ಸಹಾಯದೊಂದಿಗೆ ರಂಗಕ್ಕಿಳಿದ ದೇವಾಲಯದ ಸಿಬ್ಬಂದಿಗಳು ಶನಿವಾರ ಬೆಳಗಿನಿಂದಲೇ ಈ ತೆರವುಕಾರ್ಯವನ್ನು ಆರಂಭಿಸಿದರು.

ದೇವಾಲಯದ ಆವರಣ ಸ್ನಾನಘಟ್ಟದ ರಸ್ತೆ ಸೇರಿದಂತೆ ಬೇಕಾ ಬಿಟ್ಟಿಯಾಗಿ ಇಡಲಾಗಿದ್ದ ಎಲ್ಲ ಅಂಗಡಿಗಳನ್ನೂ ಇಂದು ತೆರವು ಗೊಳಿಸಲಾಗಿದ್ದು ನಾಳೆಯೂ ತೆರವು ಮುಂದುವರಿಯುವದು ಎನ್ನಲಾಗಿದೆ. ಕೆಲವು ವರ್ಷಗಳ ಹಿಂದೆ ಇದೇ ರೀತಿ ಇದೇ ಜಾಗದಲ್ಲಿದ್ದ ಅಂಗಡಿಗಳನ್ನು ತೆರವುಗೊಳಿಸಲಾಗಿತ್ತು.

ಅದಾದ ಕೆಲವು ದಿನಗಳ ನಂತರ ಒಬ್ಬರ ಮೇಲೋಬ್ಬರು ಪೈಪೋಟಿಗೆ ಬಿದ್ದವರಂತೆ ಸಾಕಷ್ಠು ಅಂಗಡಿಗಳು ರಾತ್ರಿ ಬೇಳಗಾಗುವದರೊಳಗೆ ತಲೆ ಎತ್ತಿ ಅನಧಿಕೃತವಾಗಿ ಇಲ್ಲಿ ವ್ಯಾಪಾರ ಮಾಡುತ್ತಿದ್ದವು. ಈ ಅಂಗಡಿಗಳಿಂದಾಗಿ ದೇವಾಲಯಕ್ಕೆ ಆಗಮಿಸುವವರಿಗೆ ಕಿರಿಕಿರಿಯಾಗುವ ದೂರುಗಳು ಫುಂಖಾನು ಫುಂಖವಾಗಿ ಬಂದರೂ ದೇವಾಲಯದ ಆಡಳಿತ ಮಾತ್ರಕಣ್ಣಿದ್ದು ಕುರಡನಂತೆ ವರ್ತಿಸುತ್ತಿತ್ತು. ಕಳೆದ ವಾರ ಶಾಸಕ ದರ್ಶನ್‌ದ್ರುವನಾರಾಯಣ ಇಲ್ಲಿಗೆ ಭೇಟಿ ನೀಡಿದಾಗ ಈ ದೂರುಗಳನ್ನು ಪರಿಶಿಲಿಸಿ ಭಕ್ತಾದಿಗಳಿಗೆ ತೊಂದರೆಯಾಗುತ್ತಿರುವ ಅನಧಿಕೃತ ವ್ಯಾಪಾರ ಹಾಗೂ ಅಂಗಡಿಗಳ ಕುರಿತಂತೆ ಕಿಡಿಕಾರಿದ್ದರು ಅದಾದ ಒಂದೇ ವಾರದಲ್ಲಿ ಅಂಗಡಿಗಳ ತೆರವು ಕಾರ್ಯ ಆರಂಭವಾಗಿದೆ.

ಅಂಗಡಿಗಳ ತೆರವು ನಂಜನಗೂಡಿನ ಪಾಲಿಗೆ ಕಣ್ಣುಮುಚ್ಚಾಲೆಯಾಟ ಎಂದವರು ಇಲ್ಲಿನ ಸಾರ್ವಜನಿಕರು . ಕಳೆದ ತಿಂಗಳು ನಂಜನಗೂಡಿನ ರಾಷ್ರö್ಠಪತಿರಸ್ತೆ ಮಹಾತ್ಮಾಗಾಂಧಿ ಶತಾಬ್ದಿರಸ್ತೆ, ನೆಹರು ವೃತ್ತ ,ಅಂಗಡಿ ಬೀದಿಗಳ ಫುಟ್ ಪಾತ್ ಗಳ ವತ್ತುವರಿತೆರವಾಗಿತ್ತು. ಆಗ ತೆರವಾದ ಅಂಗಡಿಗಳೂ ಈಗ ಮತ್ತೇ ಪೈಪೋಟಿಗೆ ಬಿದ್ದವರಂತೆ ಪಾದಚಾರಿ ಮಾರ್ಗವನ್ನು ವತ್ತುವರಿ ಮಾಡಿಯಥಾ ಸ್ಥಾನದಲ್ಲಿತಮ್ಮ ವ್ಯಾಪಾರ ಮುಂದುವರಿಸಿದ್ದು ನಂಜನಗೂಡಿನ ವತ್ತುವರಿ ತೆರವು ಎಂದರೆ ಅಧಿಕಾರಿಗಳು ಹಾಗೂ ವ್ಯಾಪಾರಿಗಳ ಪಾಲಿಗೆ ಕಣ್ಣುಮಚ್ಚಾಲೆ ಆಟದಂತಾಗಿದೆ ಎಂದ ಯೋಗೀಶ ಈ ವತ್ತುವರಿ ಹಾಗಾಗದಿರಲಿ ಮತ್ತೇ ಇಲ್ಲಿ ಅನಧಿಕೃತ ವ್ಯಾಪಾರ ಆರಂಭವಾಗದಿರಲಿ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

1 hour ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

2 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

3 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

15 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago