Categories: ಮೈಸೂರು

ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್‌ ಸೇವೆ ಪ್ರಾರಂಭಿಸಿದ ನಾರಾಯಣ ಆಸ್ಪತ್ರೆ

ಮೈಸೂರು: ನಗರದ ನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್ ಸಿಸ್ಟಂ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದಾಗಿ ರೋಗಿಯ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ನಿಖರವಾಗಿ ಶಸಚಿಕಿತ್ಸೆ ಮೂಲಕ ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಈ ಸುಧಾರಿತ ತಂತ್ರಜ್ಞಾನದ ಸೇವೆಯನ್ನು ಮೈಸೂರು ಭಾಗದಲ್ಲಿ ಏಕೈಕ ಆಸ್ಪತ್ರೆ ನಮ್ಮದು ಎಂಬ ಹಿರಿಮೆ ಇದೆ ಎಂದು ಆಸ್ಪತ್ರೆಯ ಕ್ಲಿನಿಕಲ್ ನಿರ್ದೇಶಕ ಡಾ.ಎಂ.ಎನ್.ರವಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆದುಳಿನ ಶಸಚಿಕಿತ್ಸೆಗೆ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನ್ ಚಿತ್ರಗಳನ್ನು ಬಳಸುವುದು ಸಾಮಾನ್ಯ ಸಂಗತಿ. ಆದರೆ, ಅವುಗಳನ್ನು ಮುಂದಿಟ್ಟುಕೊಅಡು ವೈದ್ಯರು ತಮ್ಮ ಅನುಭವದ ಆಧಾರದ ಮೇಲೆ ಮೆದುಳಿನ ಯಾವ ಭಾಗದಲ್ಲಿ ಗಡ್ಡೆ ಇದೆ, ಇಷ್ಟೇ ಗಾತ್ರzಗಿದೆ ಎಂದು ಅಂದಾಜಿನ ಮೇಲೆ ನಿರ್ಧರಿಸಿ ಶಸಚಿಕಿತ್ಸೆ ನಡೆಸಬೇಕಾಗಿತ್ತು.

ಆದರೆ ಈ ನೂತನ ಸಾಧನವು ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಮಾಹಿತಿಯನ್ನು ತನ್ನಲ್ಲಿ ಅಳವಡಿಸಿಕೊಂಡು, ಶಸಚಿಕಿತ್ಸೆ ವೇಳೆ ಮಾರ್ಗದರ್ಶನ ನೀಡಲಿದೆ. ಇದರಿಂದಾಗಿ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ಕಡಿಮೆ ಛೇದನದೊಡನೆ ಪೂರ್ಣ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ತೆಗೆದುಹಾಕಬಹುದಾಗಿದೆ. ಶಸಚಿಕಿತ್ಸೆ ಬಳಿಕ ರೋಗಿಯು ಬಹಳ ಬೇಗ ಚೇತರಿಸಿಕೊಳ್ಳುತ್ತಾನೆ. ಈ ಸಾಧನವನ್ನು ಬೆನ್ನುಮೂಳೆಯಂತಹ ಸಂಕೀರ್ಣ ಶಸಚಿಕಿತ್ಸೆಗೂ ಬಳಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ನರರೋಗ ಶಸಚಿಕಿತ್ಸಾ ತಜ್ಞರಾದ ಡಾ. ಗೌತಮ್ ಕುಗಾಟಿ ಹಾಗೂ ಡಾ.ಎ.ಎಚ್.ಹರ್ಷ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago