ಮೈಸೂರು: ನಗರದ ನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್ ಸಿಸ್ಟಂ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದಾಗಿ ರೋಗಿಯ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ನಿಖರವಾಗಿ ಶಸಚಿಕಿತ್ಸೆ ಮೂಲಕ ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಈ ಸುಧಾರಿತ ತಂತ್ರಜ್ಞಾನದ ಸೇವೆಯನ್ನು ಮೈಸೂರು ಭಾಗದಲ್ಲಿ ಏಕೈಕ ಆಸ್ಪತ್ರೆ ನಮ್ಮದು ಎಂಬ ಹಿರಿಮೆ ಇದೆ ಎಂದು ಆಸ್ಪತ್ರೆಯ ಕ್ಲಿನಿಕಲ್ ನಿರ್ದೇಶಕ ಡಾ.ಎಂ.ಎನ್.ರವಿ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆದುಳಿನ ಶಸಚಿಕಿತ್ಸೆಗೆ ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಸ್ಕ್ಯಾನ್ ಚಿತ್ರಗಳನ್ನು ಬಳಸುವುದು ಸಾಮಾನ್ಯ ಸಂಗತಿ. ಆದರೆ, ಅವುಗಳನ್ನು ಮುಂದಿಟ್ಟುಕೊಅಡು ವೈದ್ಯರು ತಮ್ಮ ಅನುಭವದ ಆಧಾರದ ಮೇಲೆ ಮೆದುಳಿನ ಯಾವ ಭಾಗದಲ್ಲಿ ಗಡ್ಡೆ ಇದೆ, ಇಷ್ಟೇ ಗಾತ್ರzಗಿದೆ ಎಂದು ಅಂದಾಜಿನ ಮೇಲೆ ನಿರ್ಧರಿಸಿ ಶಸಚಿಕಿತ್ಸೆ ನಡೆಸಬೇಕಾಗಿತ್ತು.
ಆದರೆ ಈ ನೂತನ ಸಾಧನವು ಸಿಟಿ ಸ್ಕ್ಯಾನ್ ಹಾಗೂ ಎಂಆರ್ಐ ಮಾಹಿತಿಯನ್ನು ತನ್ನಲ್ಲಿ ಅಳವಡಿಸಿಕೊಂಡು, ಶಸಚಿಕಿತ್ಸೆ ವೇಳೆ ಮಾರ್ಗದರ್ಶನ ನೀಡಲಿದೆ. ಇದರಿಂದಾಗಿ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ಕಡಿಮೆ ಛೇದನದೊಡನೆ ಪೂರ್ಣ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ತೆಗೆದುಹಾಕಬಹುದಾಗಿದೆ. ಶಸಚಿಕಿತ್ಸೆ ಬಳಿಕ ರೋಗಿಯು ಬಹಳ ಬೇಗ ಚೇತರಿಸಿಕೊಳ್ಳುತ್ತಾನೆ. ಈ ಸಾಧನವನ್ನು ಬೆನ್ನುಮೂಳೆಯಂತಹ ಸಂಕೀರ್ಣ ಶಸಚಿಕಿತ್ಸೆಗೂ ಬಳಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.
ನರರೋಗ ಶಸಚಿಕಿತ್ಸಾ ತಜ್ಞರಾದ ಡಾ. ಗೌತಮ್ ಕುಗಾಟಿ ಹಾಗೂ ಡಾ.ಎ.ಎಚ್.ಹರ್ಷ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…