Categories: ಮೈಸೂರು

ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್‌ ಸೇವೆ ಪ್ರಾರಂಭಿಸಿದ ನಾರಾಯಣ ಆಸ್ಪತ್ರೆ

ಮೈಸೂರು: ನಗರದ ನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್ ಸಿಸ್ಟಂ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದಾಗಿ ರೋಗಿಯ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ನಿಖರವಾಗಿ ಶಸಚಿಕಿತ್ಸೆ ಮೂಲಕ ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಈ ಸುಧಾರಿತ ತಂತ್ರಜ್ಞಾನದ ಸೇವೆಯನ್ನು ಮೈಸೂರು ಭಾಗದಲ್ಲಿ ಏಕೈಕ ಆಸ್ಪತ್ರೆ ನಮ್ಮದು ಎಂಬ ಹಿರಿಮೆ ಇದೆ ಎಂದು ಆಸ್ಪತ್ರೆಯ ಕ್ಲಿನಿಕಲ್ ನಿರ್ದೇಶಕ ಡಾ.ಎಂ.ಎನ್.ರವಿ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೆದುಳಿನ ಶಸಚಿಕಿತ್ಸೆಗೆ ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನ್ ಚಿತ್ರಗಳನ್ನು ಬಳಸುವುದು ಸಾಮಾನ್ಯ ಸಂಗತಿ. ಆದರೆ, ಅವುಗಳನ್ನು ಮುಂದಿಟ್ಟುಕೊಅಡು ವೈದ್ಯರು ತಮ್ಮ ಅನುಭವದ ಆಧಾರದ ಮೇಲೆ ಮೆದುಳಿನ ಯಾವ ಭಾಗದಲ್ಲಿ ಗಡ್ಡೆ ಇದೆ, ಇಷ್ಟೇ ಗಾತ್ರzಗಿದೆ ಎಂದು ಅಂದಾಜಿನ ಮೇಲೆ ನಿರ್ಧರಿಸಿ ಶಸಚಿಕಿತ್ಸೆ ನಡೆಸಬೇಕಾಗಿತ್ತು.

ಆದರೆ ಈ ನೂತನ ಸಾಧನವು ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಮಾಹಿತಿಯನ್ನು ತನ್ನಲ್ಲಿ ಅಳವಡಿಸಿಕೊಂಡು, ಶಸಚಿಕಿತ್ಸೆ ವೇಳೆ ಮಾರ್ಗದರ್ಶನ ನೀಡಲಿದೆ. ಇದರಿಂದಾಗಿ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ಕಡಿಮೆ ಛೇದನದೊಡನೆ ಪೂರ್ಣ ಪ್ರಮಾಣದಲ್ಲಿ ಕಡಿಮೆ ಅವಧಿಯಲ್ಲಿ ತೆಗೆದುಹಾಕಬಹುದಾಗಿದೆ. ಶಸಚಿಕಿತ್ಸೆ ಬಳಿಕ ರೋಗಿಯು ಬಹಳ ಬೇಗ ಚೇತರಿಸಿಕೊಳ್ಳುತ್ತಾನೆ. ಈ ಸಾಧನವನ್ನು ಬೆನ್ನುಮೂಳೆಯಂತಹ ಸಂಕೀರ್ಣ ಶಸಚಿಕಿತ್ಸೆಗೂ ಬಳಸಿಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ನರರೋಗ ಶಸಚಿಕಿತ್ಸಾ ತಜ್ಞರಾದ ಡಾ. ಗೌತಮ್ ಕುಗಾಟಿ ಹಾಗೂ ಡಾ.ಎ.ಎಚ್.ಹರ್ಷ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

5 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

7 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

8 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

10 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

22 hours ago