ಮೈಸೂರು

ನರೇಂದ್ರ ಮೋದಿ ಸುಳ್ಳುಗಾರ ಹಾಗೂ ವಂಚಕ : ಕೆ.ಶಿವರಾಂ

ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಶಿವರಾಂ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ಅಲ್ಪಸಂಖ್ಯಾತ ಒಕ್ಕೂಟ ಸಂಘದ ವತಿಯಿಂದ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃಧ್ದಿ ಮಾಡಿ ಮತ ಕೇಳೂತ್ತಿಲ್ಲ.  ಅದರ ಬದಲಾಗಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿದ್ದು, ಇಂದು ದೇಶದಲ್ಲಿ ಮೋದಿ ಅವರ ಮುಖವಾಡ ಕಳಚುವಂತೆ ಮಾಡಿದೆ ಎಂದು ಆರೋಪಿಸಿದರು.

ರಾಜ್ಯದ ಜನತೆಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮುಖ್ಯ ಮಂತ್ರಿಯವರು ಅಹಿಂದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.

ಬಿಜೆಪಿ ಪಕ್ಷವೂ ದೇಶದಲ್ಲಿ ಆರ್‌ಎಸ್‌ಎಸ್ ಮೂಲಕ ಮುಸ್ಲೀಮರನ್ನು ಟಾರ್ಗೆಟ್ ಮಾಡಿ ಹಿಂದೂ-ಮುಸ್ಲೀಮರನ್ನು ಕೋಮುಗಲಭೆ ಉಂಟಾಗುವಂತೆ ಮಾಡಿದೆ. ಕಳೆದ ೧೦ ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಜನರಿಗೆ ಚೊಂಬು ಕೊಟ್ಟಿದೆ. ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ ಎಂದರು.

ನಾಳೆ ದುಂಡುಮೇಜಿನ ಅಹಿಂದಾ ಸಭೆ : ನಗರದ ಗುರು ರೆಸಿಡೆನ್ಸಿಯಲ್ಲಿ ಏ.೨೪ರಂದು ಬೆಳಿಗ್ಗೆ ೧೧ಕ್ಕೆ ದುಂಡು ಮೇಜಿನ ಅಹಿಂದ ಸಭೆ ನಡೆಯಲಿದೆ. ಅದರಲ್ಲಿ ಅಹಿಂದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಿವರಾಂ ಹೇಳಿದರು.

ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜಾಧ್ಯಕ್ಷ ಭಾಸ್ಕರ್, ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಕಲೀಲ್, ದಲಿತ ಮುಖಂಡ ಎ.ಆರ್.ಕಾಂತರಾಜು, ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ಯೋಗೇಶ್ ಉಪ್ಪಾರ್, ಎಚ್.ಪ್ರಕಾಶ್, ಮೊಗ್ಗಣ್ಣಚಾರ್, ರವಿನಂದನ್ ಹಾಗೂ ಅಹಿಂದ ಮುಖಂಡ ಲೋಕೇಶ್ ಮಾದಪುರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಎಲ್ಲ ನಟರ ಅಭಿಮಾನಿಗಳು ಪೈರೆಸಿ ವಿರುದ್ಧ ಸಮರ ಸಾರುವಂತಾದರೆ!

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ವರ್ಷದ ಕೊನೆಯ ವಾರ ತೆರೆಗೆ ಬಂದಿರುವ ಚಿತ್ರಗಳಲ್ಲಿ ಒಂದು ‘ಮಾರ್ಕ್’. ಚಿತ್ರದ ಮುಖ್ಯ ಪಾತ್ರ ಮಾರ್ಕಾಂಡೇಯ…

54 mins ago

2025ರ ನೆನಪು: ಅಗಲಿದ ಗಣ್ಯರ ನೆನಪಿನ ಮಾಲಿಕೆ…

2025ರಲ್ಲಿ ವಿಧಿವಶರಾದ ಗಣ್ಯರ ಮಾಹಿತಿ  ಜನವರಿ... ನಾ.ಡಿಸೋ’ಜಾ: ಕನ್ನಡದ ಪ್ರಸಿದ್ಧ ಬರಹಗಾರ ಮತ್ತು ಕಾದಂಬರಿಕಾರ ನಾ ಡಿ’ಸೋಜಾ ಅವರು ಜನವರಿ…

60 mins ago

ಆಪರೇಟರ್ ಸಮಯ ಪ್ರಜ್ಞೆ: ನಕಲಿ ಜಿಪಿಎಗೆ ಬ್ರೇಕ್

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಸರ್ಕಾರಿ ಕಚೇರಿಯಲ್ಲಿ ಕೆಲಸ ನಿರ್ವಹಿಸುವವರು ಎಚ್ಚರಿಕೆ ವಹಿಸಿದಲ್ಲಿ ನಡೆಯ ಬಹುದಾದ ವಂಚನೆಗಳನ್ನು ಹೇಗೆ ತಪ್ಪಿಸಬಹುದು ಎಂಬುದಕ್ಕೆ ವಿಧಾನಪರಿಷತ್…

1 hour ago

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

11 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

12 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

13 hours ago