ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಶಿವರಾಂ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ಅಲ್ಪಸಂಖ್ಯಾತ ಒಕ್ಕೂಟ ಸಂಘದ ವತಿಯಿಂದ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃಧ್ದಿ ಮಾಡಿ ಮತ ಕೇಳೂತ್ತಿಲ್ಲ. ಅದರ ಬದಲಾಗಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿದ್ದು, ಇಂದು ದೇಶದಲ್ಲಿ ಮೋದಿ ಅವರ ಮುಖವಾಡ ಕಳಚುವಂತೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದ ಜನತೆಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮುಖ್ಯ ಮಂತ್ರಿಯವರು ಅಹಿಂದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.
ಬಿಜೆಪಿ ಪಕ್ಷವೂ ದೇಶದಲ್ಲಿ ಆರ್ಎಸ್ಎಸ್ ಮೂಲಕ ಮುಸ್ಲೀಮರನ್ನು ಟಾರ್ಗೆಟ್ ಮಾಡಿ ಹಿಂದೂ-ಮುಸ್ಲೀಮರನ್ನು ಕೋಮುಗಲಭೆ ಉಂಟಾಗುವಂತೆ ಮಾಡಿದೆ. ಕಳೆದ ೧೦ ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಜನರಿಗೆ ಚೊಂಬು ಕೊಟ್ಟಿದೆ. ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ ಎಂದರು.
ನಾಳೆ ದುಂಡುಮೇಜಿನ ಅಹಿಂದಾ ಸಭೆ : ನಗರದ ಗುರು ರೆಸಿಡೆನ್ಸಿಯಲ್ಲಿ ಏ.೨೪ರಂದು ಬೆಳಿಗ್ಗೆ ೧೧ಕ್ಕೆ ದುಂಡು ಮೇಜಿನ ಅಹಿಂದ ಸಭೆ ನಡೆಯಲಿದೆ. ಅದರಲ್ಲಿ ಅಹಿಂದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಿವರಾಂ ಹೇಳಿದರು.
ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜಾಧ್ಯಕ್ಷ ಭಾಸ್ಕರ್, ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಕಲೀಲ್, ದಲಿತ ಮುಖಂಡ ಎ.ಆರ್.ಕಾಂತರಾಜು, ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ಯೋಗೇಶ್ ಉಪ್ಪಾರ್, ಎಚ್.ಪ್ರಕಾಶ್, ಮೊಗ್ಗಣ್ಣಚಾರ್, ರವಿನಂದನ್ ಹಾಗೂ ಅಹಿಂದ ಮುಖಂಡ ಲೋಕೇಶ್ ಮಾದಪುರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಚಂದ್ರಾ ಲೇಔಟ್ನ ಬಿಎಂಟಿಸಿ ಡಿಪೋ ಬಳಿ ಇಂದು…
ಮಧ್ಯಪ್ರದೇಶ: ಇಲ್ಲಿನ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಗಾಮಿನಿ ಚೀತಾ ಮೂರು ಮರಿಗಳಿಗೆ ಜನ್ಮ ನೀಡಿದೆ. ಕೇಂದ್ರ ಪರಿಸರ ಸಚಿವ ಭೂಪೇಂದರ್…
ಮೈಸೂರು: ಗ್ರಾಮದೇವತೆ ಹಬ್ಬದಲ್ಲಿ ಬಂಡಿ ಓಡಿಸುವಾಗ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ತಲಕಾಡು ಗ್ರಾಮದಲ್ಲಿ ನಡೆದಿದೆ.…
ಹುಣಸೂರು: ತಾಲ್ಲೂಕಿನ ಸಾಲುಮರದ ತಿಮ್ಮಕ್ಕ ಉದ್ಯಾನವನ ಪಕ್ಕದ ಕಲ್ಬೆಟ್ಟದ ಬಳಿ ಗೋಡೌನ್ ಒಂದರಲ್ಲಿ ೧೮ ಲಕ್ಷ ರೂ. ಮೌಲ್ಯದ ೧,೨೯೬…
ಮೈಸೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಫ್ಲೆಕ್ಸ್ ಹಾವಳಿ ಮಿತಿ ಮೀರಿದ್ದು, ರಸ್ತೆ ಬದಿಯಲ್ಲಿ ಹಾಕಿರುವ ಬೃಹದಾಕಾರದ ಫ್ಲೆಕ್ಸ್ಗಳಿಂದಾಗಿ ಪ್ರತಿನಿತ್ಯ ರಸ್ತೆಯಲ್ಲಿ ಸಂಚರಿಸುವ…