ಮೈಸೂರು: ದೇಶದಲ್ಲಿ ಕಳೆದ ೧೦ ವರ್ಷಗಳಿಂದ ಅರಾಜಕತೆ, ಕೋಮು ದ್ವೇಷ, ಸಂವಿಧಾನವನ್ನು ಕೊನೆಗೊಳಿಸುವಲ್ಲಿ ಹಾಗೂ ಹಿಂದುತ್ವದಲ್ಲಿ ಹೆಸರಿನಲ್ಲಿ ಬಿಜೆಪಿ ಪಕ್ಷವೂ ಜಾತಿ, ಧರ್ಮಗಳ ಆಧಾರದ ಮೇಲೆ ಜನರ ಮತಗಳನ್ನು ಕೇಳುತ್ತಿದೆ. ಪ್ರದಾನಿ ನರೇಂದ್ರ ಮೋದಿ ಒಬ್ಬ ಸುಳ್ಳಿನ ವಂಚಕ .ಹೀಗಾಗಿ ಮತದಾರರೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಕೆ.ಶಿವರಾಂ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಮಂಗಳವಾರ, ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಸಂವಿಧಾನ ಸಂರಕ್ಷಣ ಹೋರಾಟ ಸಮಿತಿ ಹಾಗೂ ಅಲ್ಪಸಂಖ್ಯಾತ ಒಕ್ಕೂಟ ಸಂಘದ ವತಿಯಿಂದ ಏರ್ಪಡಿಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ದೇಶವನ್ನು ಅಭಿವೃಧ್ದಿ ಮಾಡಿ ಮತ ಕೇಳೂತ್ತಿಲ್ಲ. ಅದರ ಬದಲಾಗಿ ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿದ್ದು, ಇಂದು ದೇಶದಲ್ಲಿ ಮೋದಿ ಅವರ ಮುಖವಾಡ ಕಳಚುವಂತೆ ಮಾಡಿದೆ ಎಂದು ಆರೋಪಿಸಿದರು.
ರಾಜ್ಯದ ಜನತೆಗಾಗಿ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿರುವ ಮುಖ್ಯ ಮಂತ್ರಿಯವರು ಅಹಿಂದಕ್ಕೆ ಅನ್ಯಾಯ ಮಾಡಿದ್ದಾರೆ ಎಂದು ಹೇಳಲು ಬಿಜೆಪಿ ಪಕ್ಷಕ್ಕೆ ನಾಚಿಕೆಯಾಗಬೇಕು ಎಂದು ಟೀಕಿಸಿದರು.
ಬಿಜೆಪಿ ಪಕ್ಷವೂ ದೇಶದಲ್ಲಿ ಆರ್ಎಸ್ಎಸ್ ಮೂಲಕ ಮುಸ್ಲೀಮರನ್ನು ಟಾರ್ಗೆಟ್ ಮಾಡಿ ಹಿಂದೂ-ಮುಸ್ಲೀಮರನ್ನು ಕೋಮುಗಲಭೆ ಉಂಟಾಗುವಂತೆ ಮಾಡಿದೆ. ಕಳೆದ ೧೦ ವರ್ಷಗಳಲ್ಲಿ ಕೇಂದ್ರದಲ್ಲಿ ಬಿಜೆಪಿ ಜನರಿಗೆ ಚೊಂಬು ಕೊಟ್ಟಿದೆ. ಬಿಜೆಪಿಗೆ ಅಭಿವೃದ್ದಿ ಬೇಕಾಗಿಲ್ಲ ಎಂದರು.
ನಾಳೆ ದುಂಡುಮೇಜಿನ ಅಹಿಂದಾ ಸಭೆ : ನಗರದ ಗುರು ರೆಸಿಡೆನ್ಸಿಯಲ್ಲಿ ಏ.೨೪ರಂದು ಬೆಳಿಗ್ಗೆ ೧೧ಕ್ಕೆ ದುಂಡು ಮೇಜಿನ ಅಹಿಂದ ಸಭೆ ನಡೆಯಲಿದೆ. ಅದರಲ್ಲಿ ಅಹಿಂದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಶಿವರಾಂ ಹೇಳಿದರು.
ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜಾಧ್ಯಕ್ಷ ಭಾಸ್ಕರ್, ಅಲ್ಪಸಂಖ್ಯಾತ ಒಕ್ಕೂಟದ ರಾಜ್ಯಾಧ್ಯಕ್ಷ ಕಲೀಲ್, ದಲಿತ ಮುಖಂಡ ಎ.ಆರ್.ಕಾಂತರಾಜು, ವಿವಿಧ ಸಂಘಟನೆಗಳ ಜಿಲ್ಲಾಧ್ಯಕ್ಷರಾದ ಯೋಗೇಶ್ ಉಪ್ಪಾರ್, ಎಚ್.ಪ್ರಕಾಶ್, ಮೊಗ್ಗಣ್ಣಚಾರ್, ರವಿನಂದನ್ ಹಾಗೂ ಅಹಿಂದ ಮುಖಂಡ ಲೋಕೇಶ್ ಮಾದಪುರ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…