ಮೈಸೂರು

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂತು ಹೆಚ್ಚು ಅಂಕ; ಆದ್ರೂ ಸಿಗಲಿಲ್ಲ ಸೀಟ್!

ಮೈಸೂರು: ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟದಲ್ಲಿ ಸಿಲುಕಿರುವ ಘಟನೆ ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಸಂಬಂಧ ನಗರದಲ್ಲಿ ಶುಕ್ರವಾರ(ಜೂನ್‌.7) ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿ ಕೆ.ಎಸ್.ಶ್ರಾವ್ಯ, ಪೋಷಕರಾದ ಕೆ.ಎನ್.ಶ್ರೀನಿವಾಸ್ ಮತ್ತು ಸುಮಾ ಶ್ರಿನಿವಾಸ ಮಾತನಾಡಿದರು.

ಕಾವ್ಯ ಪೋಷಕರಾದ ಶ್ರೀನಿವಾಸ ಮಾತನಾಡಿ, ಮಂಡ್ಯ ಜಿಲ್ಲೆಯ ಅರೇಕೆರೆಯ ಜೀವೋದಯ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ತಮ್ಮ ಮಗಳು ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ವೇಳೆ ಉತ್ತಮ ಅಂಕ ಗಳಿಸುವ ಭರವಸೆ ಇದ್ದ ವಿದ್ಯಾರ್ಥಿಗೆ ಉತ್ತೀರ್ಣಳಾದ ಬಳಿಕ ಬಂದ ಅಂಕಗಳಲ್ಲಿ ಅಸಮಾಧಾನ ಇತ್ತು. ಇದರಿಂದಾಗಿ ಮರು ಮೌಲ್ಯಮಾಪನಕ್ಕೆ ಹಾಕಲಾಯಿತು. ಮರು ಮೌಲ್ಯಮಾಪನ ನಂತರ ವಿದ್ಯಾರ್ಥಿಗೆ 545 ಅಂಕ ಪಡೆದಿದ್ದ ವಿದ್ಯಾರ್ಥಿನಿ, ಮರು ಮೌಲ್ಯ ಮಾಪನದಲ್ಲಿ 606 ಅಂಕ ಸಿಕ್ಕಿತು.

ಮೊದಲ ಫಲಿತಾಂಶದಲ್ಲಿ ಶೇ.87 ಫಲಿತಾಂಶ ಬಂದಿದ್ದರೆ, ಮರು ಮೌಲ್ಯಮಾಪನದ ನಂತರ ಶೇ.97ರಷ್ಟು ಫಲಿತಾಂಶ ದೊರೆತಿದೆ. ಈ ಮೌಲ್ಯಮಾಪನದಲ್ಲಿ ಅಂಕಗಳು ತಪ್ಪಾಗಿ ಬರಲು ಮೌಲ್ಯಮಾಪನ ಸಿಬ್ಬಂದಿಯ ಯಡವಟ್ಟುಗಳೇ ಕಾರಣ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ಮಗಳು ಇಚ್ಛೆಪಟ್ಟ ಕಾಲೇಜಿನಲ್ಲಿ ಎಂದು ಒತ್ತಾಯಿಸಿದರು.

ಮೌಲ್ಯ ಮಾಪಕರು ಮಾಡಿದ ಎಡವಟ್ಟಿನಿಂದಾಗಿ ನಮ್ಮ ಮಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ತಂದೆ ಅಳಲು ತೋಡಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

6 hours ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

6 hours ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

7 hours ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

7 hours ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

7 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

9 hours ago