ಮೈಸೂರು: ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟದಲ್ಲಿ ಸಿಲುಕಿರುವ ಘಟನೆ ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಸಂಬಂಧ ನಗರದಲ್ಲಿ ಶುಕ್ರವಾರ(ಜೂನ್.7) ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿ ಕೆ.ಎಸ್.ಶ್ರಾವ್ಯ, ಪೋಷಕರಾದ ಕೆ.ಎನ್.ಶ್ರೀನಿವಾಸ್ ಮತ್ತು ಸುಮಾ ಶ್ರಿನಿವಾಸ ಮಾತನಾಡಿದರು.
ಕಾವ್ಯ ಪೋಷಕರಾದ ಶ್ರೀನಿವಾಸ ಮಾತನಾಡಿ, ಮಂಡ್ಯ ಜಿಲ್ಲೆಯ ಅರೇಕೆರೆಯ ಜೀವೋದಯ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ತಮ್ಮ ಮಗಳು ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ವೇಳೆ ಉತ್ತಮ ಅಂಕ ಗಳಿಸುವ ಭರವಸೆ ಇದ್ದ ವಿದ್ಯಾರ್ಥಿಗೆ ಉತ್ತೀರ್ಣಳಾದ ಬಳಿಕ ಬಂದ ಅಂಕಗಳಲ್ಲಿ ಅಸಮಾಧಾನ ಇತ್ತು. ಇದರಿಂದಾಗಿ ಮರು ಮೌಲ್ಯಮಾಪನಕ್ಕೆ ಹಾಕಲಾಯಿತು. ಮರು ಮೌಲ್ಯಮಾಪನ ನಂತರ ವಿದ್ಯಾರ್ಥಿಗೆ 545 ಅಂಕ ಪಡೆದಿದ್ದ ವಿದ್ಯಾರ್ಥಿನಿ, ಮರು ಮೌಲ್ಯ ಮಾಪನದಲ್ಲಿ 606 ಅಂಕ ಸಿಕ್ಕಿತು.
ಮೊದಲ ಫಲಿತಾಂಶದಲ್ಲಿ ಶೇ.87 ಫಲಿತಾಂಶ ಬಂದಿದ್ದರೆ, ಮರು ಮೌಲ್ಯಮಾಪನದ ನಂತರ ಶೇ.97ರಷ್ಟು ಫಲಿತಾಂಶ ದೊರೆತಿದೆ. ಈ ಮೌಲ್ಯಮಾಪನದಲ್ಲಿ ಅಂಕಗಳು ತಪ್ಪಾಗಿ ಬರಲು ಮೌಲ್ಯಮಾಪನ ಸಿಬ್ಬಂದಿಯ ಯಡವಟ್ಟುಗಳೇ ಕಾರಣ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ಮಗಳು ಇಚ್ಛೆಪಟ್ಟ ಕಾಲೇಜಿನಲ್ಲಿ ಎಂದು ಒತ್ತಾಯಿಸಿದರು.
ಮೌಲ್ಯ ಮಾಪಕರು ಮಾಡಿದ ಎಡವಟ್ಟಿನಿಂದಾಗಿ ನಮ್ಮ ಮಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ತಂದೆ ಅಳಲು ತೋಡಿಕೊಂಡಿದ್ದಾರೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…