ಮೈಸೂರು: ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದಾಗಿ ಎಸ್ಎಸ್ಎಲ್ಸಿ ಪರೀಕ್ಷೆಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟದಲ್ಲಿ ಸಿಲುಕಿರುವ ಘಟನೆ ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಸಂಬಂಧ ನಗರದಲ್ಲಿ ಶುಕ್ರವಾರ(ಜೂನ್.7) ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿ ಕೆ.ಎಸ್.ಶ್ರಾವ್ಯ, ಪೋಷಕರಾದ ಕೆ.ಎನ್.ಶ್ರೀನಿವಾಸ್ ಮತ್ತು ಸುಮಾ ಶ್ರಿನಿವಾಸ ಮಾತನಾಡಿದರು.
ಕಾವ್ಯ ಪೋಷಕರಾದ ಶ್ರೀನಿವಾಸ ಮಾತನಾಡಿ, ಮಂಡ್ಯ ಜಿಲ್ಲೆಯ ಅರೇಕೆರೆಯ ಜೀವೋದಯ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ತಮ್ಮ ಮಗಳು ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ವೇಳೆ ಉತ್ತಮ ಅಂಕ ಗಳಿಸುವ ಭರವಸೆ ಇದ್ದ ವಿದ್ಯಾರ್ಥಿಗೆ ಉತ್ತೀರ್ಣಳಾದ ಬಳಿಕ ಬಂದ ಅಂಕಗಳಲ್ಲಿ ಅಸಮಾಧಾನ ಇತ್ತು. ಇದರಿಂದಾಗಿ ಮರು ಮೌಲ್ಯಮಾಪನಕ್ಕೆ ಹಾಕಲಾಯಿತು. ಮರು ಮೌಲ್ಯಮಾಪನ ನಂತರ ವಿದ್ಯಾರ್ಥಿಗೆ 545 ಅಂಕ ಪಡೆದಿದ್ದ ವಿದ್ಯಾರ್ಥಿನಿ, ಮರು ಮೌಲ್ಯ ಮಾಪನದಲ್ಲಿ 606 ಅಂಕ ಸಿಕ್ಕಿತು.
ಮೊದಲ ಫಲಿತಾಂಶದಲ್ಲಿ ಶೇ.87 ಫಲಿತಾಂಶ ಬಂದಿದ್ದರೆ, ಮರು ಮೌಲ್ಯಮಾಪನದ ನಂತರ ಶೇ.97ರಷ್ಟು ಫಲಿತಾಂಶ ದೊರೆತಿದೆ. ಈ ಮೌಲ್ಯಮಾಪನದಲ್ಲಿ ಅಂಕಗಳು ತಪ್ಪಾಗಿ ಬರಲು ಮೌಲ್ಯಮಾಪನ ಸಿಬ್ಬಂದಿಯ ಯಡವಟ್ಟುಗಳೇ ಕಾರಣ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ಮಗಳು ಇಚ್ಛೆಪಟ್ಟ ಕಾಲೇಜಿನಲ್ಲಿ ಎಂದು ಒತ್ತಾಯಿಸಿದರು.
ಮೌಲ್ಯ ಮಾಪಕರು ಮಾಡಿದ ಎಡವಟ್ಟಿನಿಂದಾಗಿ ನಮ್ಮ ಮಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ತಂದೆ ಅಳಲು ತೋಡಿಕೊಂಡಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…