ಮೈಸೂರು

ಎಸ್‌ಎಸ್‌ಎಲ್‌ಸಿ ಮರು ಮೌಲ್ಯಮಾಪನದಲ್ಲಿ ಬಂತು ಹೆಚ್ಚು ಅಂಕ; ಆದ್ರೂ ಸಿಗಲಿಲ್ಲ ಸೀಟ್!

ಮೈಸೂರು: ಮೌಲ್ಯಮಾಪಕರು ಮಾಡಿದ ಯಡವಟ್ಟಿನಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವಿದ್ಯಾರ್ಥಿನಿಯೊಬ್ಬರು ಸಂಕಷ್ಟದಲ್ಲಿ ಸಿಲುಕಿರುವ ಘಟನೆ ಜಿಲ್ಲೆಯ ತಿ. ನರಸೀಪುರ ತಾಲೂಕಿನ ಕೊಡಗಳ್ಳಿ ಗ್ರಾಮದಲ್ಲಿ ನಡೆದಿದೆ.

ಈ ಸಂಬಂಧ ನಗರದಲ್ಲಿ ಶುಕ್ರವಾರ(ಜೂನ್‌.7) ಸುದ್ದಿಗೋಷ್ಠಿ ನಡೆಸಿ ವಿದ್ಯಾರ್ಥಿನಿ ಕೆ.ಎಸ್.ಶ್ರಾವ್ಯ, ಪೋಷಕರಾದ ಕೆ.ಎನ್.ಶ್ರೀನಿವಾಸ್ ಮತ್ತು ಸುಮಾ ಶ್ರಿನಿವಾಸ ಮಾತನಾಡಿದರು.

ಕಾವ್ಯ ಪೋಷಕರಾದ ಶ್ರೀನಿವಾಸ ಮಾತನಾಡಿ, ಮಂಡ್ಯ ಜಿಲ್ಲೆಯ ಅರೇಕೆರೆಯ ಜೀವೋದಯ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನಲ್ಲಿ ತಮ್ಮ ಮಗಳು ವ್ಯಾಸಂಗ ಮಾಡುತ್ತಿದ್ದಳು. ಪರೀಕ್ಷೆ ವೇಳೆ ಉತ್ತಮ ಅಂಕ ಗಳಿಸುವ ಭರವಸೆ ಇದ್ದ ವಿದ್ಯಾರ್ಥಿಗೆ ಉತ್ತೀರ್ಣಳಾದ ಬಳಿಕ ಬಂದ ಅಂಕಗಳಲ್ಲಿ ಅಸಮಾಧಾನ ಇತ್ತು. ಇದರಿಂದಾಗಿ ಮರು ಮೌಲ್ಯಮಾಪನಕ್ಕೆ ಹಾಕಲಾಯಿತು. ಮರು ಮೌಲ್ಯಮಾಪನ ನಂತರ ವಿದ್ಯಾರ್ಥಿಗೆ 545 ಅಂಕ ಪಡೆದಿದ್ದ ವಿದ್ಯಾರ್ಥಿನಿ, ಮರು ಮೌಲ್ಯ ಮಾಪನದಲ್ಲಿ 606 ಅಂಕ ಸಿಕ್ಕಿತು.

ಮೊದಲ ಫಲಿತಾಂಶದಲ್ಲಿ ಶೇ.87 ಫಲಿತಾಂಶ ಬಂದಿದ್ದರೆ, ಮರು ಮೌಲ್ಯಮಾಪನದ ನಂತರ ಶೇ.97ರಷ್ಟು ಫಲಿತಾಂಶ ದೊರೆತಿದೆ. ಈ ಮೌಲ್ಯಮಾಪನದಲ್ಲಿ ಅಂಕಗಳು ತಪ್ಪಾಗಿ ಬರಲು ಮೌಲ್ಯಮಾಪನ ಸಿಬ್ಬಂದಿಯ ಯಡವಟ್ಟುಗಳೇ ಕಾರಣ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು. ನಮ್ಮ ಮಗಳು ಇಚ್ಛೆಪಟ್ಟ ಕಾಲೇಜಿನಲ್ಲಿ ಎಂದು ಒತ್ತಾಯಿಸಿದರು.

ಮೌಲ್ಯ ಮಾಪಕರು ಮಾಡಿದ ಎಡವಟ್ಟಿನಿಂದಾಗಿ ನಮ್ಮ ಮಗಳ ಭವಿಷ್ಯಕ್ಕೆ ತೊಂದರೆಯಾಗಿದೆ ಎಂದು ವಿದ್ಯಾರ್ಥಿನಿ ತಂದೆ ಅಳಲು ತೋಡಿಕೊಂಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

9 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

11 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

19 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

19 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

19 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

20 hours ago