ಮೈಸೂರು

ತಮಿಳುನಾಡಿನಲ್ಲಿ ಆ.27 ರಂದು ರಾಷ್ಟ್ರೀಯ ರೈತ ಸಮಾವೇಶ

ಮೈಸೂರು: ಇದೇ ಆಗಸ್ಟ್‌ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾ‌ರ್ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ಭಾಗವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ, ಸರ್ವೋಚ್ಚ ನ್ಯಾಯಾಲಯದ ಸೂಚನೆ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ಈ ಸಮಾವೇಶದಲ್ಲಿ ತೀರ್ಮಾನಿಸಲಾಗುವುದು.

ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಕಾವೇರಿ ಹೆಚ್ಚುವರಿ ನೀರನ್ನು ಮೇಕೆದಾಟು ಜಲಾಶಯ ನಿರ್ಮಿಸಿ ಸಂಕಷ್ಟಕಾಲದಲ್ಲಿ ನೀರನ್ನ ಬಳಸಿಕೊಳ್ಳುವ ಬಗ್ಗೆ ತಮಿಳುನಾಡಿನ ರೈತ ಮುಖಂಡರ ಜೊತೆ 28 ರಂದು ತಂಜಾವೂರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.

ಮೆಕ್ಕೆಜೋಳ ಎಂ.ಎಸ್.ಪಿ. ಖರೀದಿ ಬೆಲೆ ನಿಗದಿಯಾಗಿದೆ. ರೈತರು ಸ್ಥಳೀಯ ಮಾರುಕಟ್ಟೆಯಲ್ಲಿ 4000 ಮಾರಾಟ ಮಾಡುತ್ತಿರುವುದು ನಿಲ್ಲಿಸಿ. ಕೇಂದ್ರ ಸರ್ಕಾರ ಖರೀದಿ ಕೇಂದ್ರ ಆರಂಭಿಸಲು ಸೂಚನೆ ನೀಡಿದೆ ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ರೈತರು ಕಡಿಮೆ ಬೆಲೆಗೆ ಮಾರಿ ನಷ್ಟವಾಗುವುದು ತಪ್ಪುತ್ತದೆ ಎಂದು ರೈತರಲ್ಲಿ ಮನವಿ ಮಾಡುತ್ತೇನೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾ‌ರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನನ್ನ ಇಲಾಖೆಯಲ್ಲಿ 4 ಸಾವಿರ ಹುದ್ದೆಗಳಿಗೆ ನೇಮಕಾತಿ: ಸಚಿವ ಪರಮೇಶ್ವರ್‌

ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್‌ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್‌…

34 mins ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

54 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

1 hour ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

1 hour ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

1 hour ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

2 hours ago