ಮೈಸೂರು: ಇದೇ ಆಗಸ್ಟ್ 27ರಂದು ತಮಿಳುನಾಡಿನ ತಿರುಚಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ರಾಷ್ಟ್ರೀಯ ರೈತ ಸಮಾವೇಶ ನಡೆಯಲಿದೆ ಎಂದು ಈ ಬಗ್ಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರ್ ಶಾಂತಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ತಮಿಳುನಾಡಿನ ತಿರುಚಿಯಲ್ಲಿ ನಡೆಯುವ ರೈತ ಸಮಾವೇಶಕ್ಕೆ ಕರ್ನಾಟಕದಿಂದ ನೂರಾರು ಸಂಖ್ಯೆಯ ರೈತರು ಭಾಗವಹಿಸುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟ, ಸರ್ವೋಚ್ಚ ನ್ಯಾಯಾಲಯದ ಸೂಚನೆ ಬಗ್ಗೆ ಚರ್ಚಿಸಿ ಮುಂದಿನ ಹೋರಾಟದ ಬಗ್ಗೆ ಈ ಸಮಾವೇಶದಲ್ಲಿ ತೀರ್ಮಾನಿಸಲಾಗುವುದು.
ರಾಷ್ಟ್ರದ ಎಲ್ಲಾ ರಾಜ್ಯಗಳ ರೈತ ಮುಖಂಡರು ಈ ಸಮಾವೇಶದಲ್ಲಿ ಭಾಗವಹಿಸುತ್ತಿದ್ದಾರೆ. ಕಾವೇರಿ ಹೆಚ್ಚುವರಿ ನೀರನ್ನು ಮೇಕೆದಾಟು ಜಲಾಶಯ ನಿರ್ಮಿಸಿ ಸಂಕಷ್ಟಕಾಲದಲ್ಲಿ ನೀರನ್ನ ಬಳಸಿಕೊಳ್ಳುವ ಬಗ್ಗೆ ತಮಿಳುನಾಡಿನ ರೈತ ಮುಖಂಡರ ಜೊತೆ 28 ರಂದು ತಂಜಾವೂರಿಯಲ್ಲಿ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ತಿಳಿಸಿದರು.
ಮೆಕ್ಕೆಜೋಳ ಎಂ.ಎಸ್.ಪಿ. ಖರೀದಿ ಬೆಲೆ ನಿಗದಿಯಾಗಿದೆ. ರೈತರು ಸ್ಥಳೀಯ ಮಾರುಕಟ್ಟೆಯಲ್ಲಿ 4000 ಮಾರಾಟ ಮಾಡುತ್ತಿರುವುದು ನಿಲ್ಲಿಸಿ. ಕೇಂದ್ರ ಸರ್ಕಾರ ಖರೀದಿ ಕೇಂದ್ರ ಆರಂಭಿಸಲು ಸೂಚನೆ ನೀಡಿದೆ ರಾಜ್ಯ ಸರ್ಕಾರ ಕೂಡಲೇ ಆರಂಭಿಸಬೇಕು. ರೈತರು ಕಡಿಮೆ ಬೆಲೆಗೆ ಮಾರಿ ನಷ್ಟವಾಗುವುದು ತಪ್ಪುತ್ತದೆ ಎಂದು ರೈತರಲ್ಲಿ ಮನವಿ ಮಾಡುತ್ತೇನೆ ಎಂದು ಸಂಯುಕ್ತ ಕಿಸಾನ್ ಮೋರ್ಚ (ರಾಜಕೀಯೇತರ) ಸಂಘಟನೆಯ ದಕ್ಷಿಣ ಭಾರತ ಸಂಚಾಲಕ ಕುರುಬೂರ್ ಶಾಂತಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…