ಮೈಸೂರು

ಜನವರಿ 8ರಿಂದ ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟೀಯ ಕ್ರೀಡಾಕೂಟ

ಮೈಸೂರು: ಏಕಲವ್ಯ ಮಾದರಿ ವಸತಿ ಶಾಲೆಗಳ ರಾಷ್ಟ್ರೀಯ ಕ್ರೀಡಾಕೂಟವನ್ನು ಮೈಸೂರಿನಲ್ಲಿ ಜನವರಿ 8 ರಿಂದ 12 ರವರೆಗೆ ಆಯೋಜಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕ್ರೀಡಾ ಹಾಗೂ ಯುವಸಬಲೀಕರಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಂಜುನಾಥ್ ಪ್ರಸಾದ್ ಅವರು ತಿಳಿಸಿದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನವರಿ 7 ರಂದು ಮಾನ್ಯ ಕೇಂದ್ರ ಸಚಿವರಾದ ಅರ್ಜುನ್ ಮುಂಡಾ ಸೇರಿದಂತೆ ರಾಜ್ಯದ ವಿವಿಧ ಸಚಿವರು, ಗಣ್ಯ ವ್ಯಕ್ತಿಗಳು ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ದೇಶದ ವಿವಿಧ ರಾಜ್ಯಗಳಿಂದ 4,500 ಕ್ರೀಡಾಪಟುಗಳು, 1500 ಶಾಲಾ ಶಿಕ್ಷಕರು ಸಿಬ್ಬಂದಿಗಳು ಸೇರಿದಂತೆ ಸುಮಾರು 6,000 ಜನ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಏಕಲವ್ಯ ಮಾದರಿ ವಸತಿ ಶಾಲೆಯು ಕೇಂದ್ರ ಸರ್ಕಾರ ನಡೆಸುತ್ತಿರುವ ಶಾಲೆಗಳಾಗಿದ್ದು, 20 ಕೋಟಿ ವೆಚ್ಚ ಅನುದಾನದಲ್ಲಿ ಸದರಿ ಕಾರ್ಯಕ್ರಮವನ್ನು ಮೈಸೂರಿನಲ್ಲಿ ಈ ಬಾರಿ ಆಯೋಜಿಸಲಾಗುತ್ತಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಅಂದಾಜು 5 ಕ್ರೀಡಾಂಗಣಗಳಲ್ಲಿ, ಏಕಕಾಲದಲ್ಲಿ ಕ್ರೀಡಾಸ್ಪರ್ಧೆಗಳು ಜರುಗಲಿದ್ದು, ಕ್ರೀಡಾಪಟುಗಳ ಸಂಚಾರಕ್ಕೆ ವಾಹನಗಳನ್ನು ಒದಗಿಸುವ ಕುರಿತು, ಕ್ರೀಡಾಂಗಣಗಳ ಸ್ವಚ್ಛತೆ, ಊಟದ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ವೈದ್ಯಕೀಯ ವ್ಯವಸ್ಥೆ, ಆಂಬುಲೆನ್ಸ್ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಪೋಲಿಸ್ ಬಂದೋಬಸ್ತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಸಂಬAಧಪಟ್ಟ ಇಲಾಖಾ ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.

ಮೈಸೂರಿಗೆ ಆಗಮಿಸುವ ಕ್ರೀಡಾಪಟುಗಳಿಗೆ ಮೈಸೂರಿನ ಸಂಸ್ಕೃತಿ ಪರಂಪರೆಯನ್ನು ಪರಿಚಯಿಸುವ ವ್ಯವಸ್ಥೆ ಆಗಬೇಕು. ದೀಪಾಲಂಕಾರ ಹಾಗೂ ಚಾಮುಂಡಿ ಬೆಟ್ಟ ವೀಕ್ಷಣೆಗೆ ವ್ಯವಸ್ಥೆ ಮಾಡುವಂತೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರಾದ ಡಾ. ಜಿತೇಂದ್ರ ಶೆಟ್ಟಿ ಅವರು ಮಾತನಾಡಿ ಕ್ರೀಡಾಕೂಟದಲ್ಲಿ 10 ಗುಂಪು ಕ್ರೀಡಾಸ್ಪರ್ಧೆಗಳನ್ನು ಹಾಗೂ 18 ಅಥ್ಲೆಟಿಕ್ಸ್ ಸ್ಪರ್ಧೆಗಳನ್ನು ಆಯೋಜಿಸಲಾಗುವುದು. ಕ್ರೀಡೆ ನಡೆಯುವ ಸ್ಥಳ, ಸಮಯ, ಕೆಲಸಗಳಿಗೆ ನಿಯೋಜಿಸಲ್ಪಟ್ಟ ನೋಡಲ್ ಅಧಿಕಾರಿಗಳ ವಿವರ ಎಲ್ಲವನ್ನು ಮುಂಚಿತವಾಗಿಯೇ ತಲುಪಿಸುವ ವ್ಯವಸ್ಥೆ ಆಗುತ್ತದೆ. ಈಗಾಗಲೇ 3500 ಮಕ್ಕಳಿಗೆ ಇನ್ಸೂರೆನ್ಸ್ ಮಾಡಿಸಲಾಗಿದೆ. ಕ್ರೀಡಾಕೂಟದಲ್ಲಿ ಕೋವಿಡ್ ಸೂಚನೆಗಳನ್ನು ಪಾಲಿಸಲಾಗುವುದು. ಪ್ರತಿಯೊಂದು ರಾಜ್ಯಕ್ಕೂ ನೋಡಲು ಅಧಿಕಾರಿಗಳನ್ನು ನಿಯೋಜಿಸಲಾಗುವುದು ಎಂದು ಮಾಹಿತಿ ನೀಡಿದರು.

ಜನವರಿ 15 ರಂದು ಪ್ರಧಾನಿ ಜೊತೆ ವಿಡಿಯೋ ಸಂವಾದ

ಜನವರಿ 15 ರಂದು ನೈಜ ದುರ್ಬಲ ಬುಡಕಟ್ಟು ಜನಾಂಗದವರ ಜೊತೆ ಪ್ರಧಾನಮಂತ್ರಿಗಳ ವಿಡಿಯೋ ಸಂವಾದ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದ್ದು, ವೀಡಿಯೋ ಸಂವಾದ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಗಳು ನೈಜ ದುರ್ಬಲ ಬುಡಕಟ್ಟು ಜನಾಂಗದ (ಜೇನು ಕುರುಬ ಮತ್ತು ಕೊರಗ) ಜನರ ಜೊತೆ ನೇರ ಸಂಭಾಷಣೆ ನಡೆಸುವರು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಮಂಜುನಾಥ್ ಪ್ರಸಾದ್ ಅವರು ತಿಳಿಸಿದರು.

ದೇಶದಲ್ಲಿ ನೈಜ ದುರ್ಬಲ ಬುಡಕಟ್ಟು ಜನಾಂಗದ ಸಂಖ್ಯೆ 20 ಲಕ್ಷ ವಿದ್ದು, ರಾಜ್ಯದಲ್ಲಿ 70 ಸಾವಿರ ಜನಸಂಖ್ಯೆ ಇದೆ. ಆದಿವಾಸಿ ದುರ್ಬಲ ಬುಡಕಟ್ಟು ಜನಾಂಗದ ಅಭಿವೃದ್ಧಿ ಯೋಜನೆ ಅಡಿ 24 ಸಾವಿರ ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಲಿದ್ದು, ಸದರಿ ಯೋಜನೆಯು ಆದಿವಾಸಿಗಳ ಮನೆ ನಿರ್ಮಾಣ, ರಸ್ತೆ ನಿರ್ಮಾಣ, ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆ, ಶಾಲೆ, ವಿದ್ಯಾರ್ಥಿ ನಿಲಯ, ಆಸ್ಪತ್ರೆ ನಿರ್ಮಾಣ, ಅಂಗನವಾಡಿ ನಿರ್ಮಾಣ, ಸಮುದಾಯ ಭವನ ನಿರ್ಮಾಣ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿದೆ ಎಂದರು.

ಈ ಕುರಿತು ಮಾನ್ಯ ಪ್ರಧಾನ ಮಂತ್ರಿಗಳು ನಡೆಸಲಿರುವ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ 50 ರಿಂದ 75 ಆದಿವಾಸಿ ಜನರು ಭಾಗವಹಿಸಲಿದ್ದು, ಸಕಲ ಸಿದ್ಧತೆಗಳನ್ನು ಮಾಡುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ, ಪರಿಶಿಷ್ಟ ವರ್ಗಗಳ ಇಲಾಖೆಯ ನಿರ್ದೇಶಕರಾದ ಕಲ್ಲೇಶ್, ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್, ಡಿಸಿಪಿ ಜಾಹ್ನವಿ,ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಆಶಾದ್ ಉರ್ ರೆಹ್ಮಾನ್ ಶರೀಫ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ, ಯೋಜನಾ ನಿರ್ದೇಶಕರಾದ ಮುನಿರಾಜು ಹಾಗೂ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕರಾದ ಅಶೋಕ್ ಕುಮಾರ್. ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

andolanait

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

11 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago