ಮೈಸೂರು

ಮಹಾರಾಣಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಇಂದು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ವಿವಿಧ ಪ್ರಭೇದದ ಸುಮಾರು 200 ಸಸಿಗಳನ್ನು ಕಾಲೇಜು ಉದ್ಯಾನವನದಲ್ಲಿ ನೆಡಲಾಯಿತು. ಕಾಲೇಜಿನಲ್ಲಿರುವ ಎರಡು ಘಟಕಗಳ ಸುಮಾರು 200 ವಿದ್ಯಾರ್ಥಿಗಳು ಸಸಿಗಳನ್ನು ನೆಟ್ಟು ನೀರೆರೆದರು.

ಕಾಲೇಜಿನ ಅಧ್ಯಾಪಕರು ಮತ್ತು ಅಧ್ಯಾಪಕೇತರ ಸಿಬ್ಬಂದಿ ಸುಮಾರು 7 ಸಾವಿರ ರೂಪಾಯಿ ಮೌಲ್ಯದ ಸಸಿಗಳನ್ನು ಕೊಡುಗೆಯಾಗಿ ನೀಡಿದರು. ವಿದ್ಯಾರ್ಥಿಗಳು ಅವುಗಳನ್ನು ನೆಟ್ಟು ನೀರೆರೆದರು.

ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ನಟರಾಜ್ ಕೆ ಅವರು ಮಾತನಾಡಿ ಗಿಡಗಳನ್ನು ಉಳಿಸಿ ಬೆಳೆಸಲು ಸಲಹೆ ನೀಡಿದರು.

ಗಿಡ ಮರಗಳು ನಮಗೆ ಜೀವ ಜೀವನ ಎರಡನ್ನು ನೀಡುತ್ತವೆ. ಹಾಗಾಗಿ ಜೀವ ನೀಡುವ ಜೀವಗಳನ್ನು ಸ್ವಾಭಾವಿಕವಾಗಿ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ. ಅದನ್ನು ಮರೆತ ಕಾರಣ ಒಂದು ಕಾರ್ಯಕ್ರಮ ಮಾಡಿ ಗಿಡಗಳನ್ನು ನಾವು ನೆಡುವ ಸ್ಥಿತಿಗೆ ತಲುಪಿದ್ದೇವೆ. ಇದು ಅನಿವಾರ್ಯ. ಆದರೂ ಗಿಡ ನೆಟ್ಟು, ಉಳಿಸಿ ಬೆಳೆಸುವುದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜು ಪ್ರಾಂಶುಪಾಲ ಪ್ರೊ.ಎಂ.ಅಬ್ದುಲ್ ರಹಿಮಾನ್ ರಾಷ್ಟ್ರೀಯ ಸೇವಾ ಯೋಜನೆ ಮೂಲಕ ನಾವು ಕಾಡು ಉಳಿಸಿ ಬೆಳೆಸುವುದರ ಜತೆಗೆ ಗ್ರಾಮೀಣ ಭಾಗದಲ್ಲಿ ಜನರ ಸೇವೆ ಮತ್ತು ಸವಲತ್ತು ಕುರಿತು ಅರಿವು ಮೂಡಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿ ಪಥದತ್ತ ಹೋಗಲು ಸಹಕಾರಿ ಆಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ಅಧಿಕಾರಿಗಳಾದ ಡಾ.ಲಕ್ಷ್ಮಣ ಬಿ, ಪ್ರೊ.ಶುಭಾ ಬಿ.ಎಸ್, ಅಧ್ಯಾಪಕ ಸಂಘದ ಕಾರ್ಯದರ್ಶಿ ರಮೇಶ ಕೆ.ಎಲ್, ಸಾಂಸ್ಕೃತಿಕ ಸಮಿತಿ ಸಂಚಾಲಕ ಗೋವಿಂದರಾಜು, ಅಧ್ಯಾಪಕರಾದ ಸುಧಾ, ಲೀಲಾವತಿ, ಪ್ರಮೀಳಾ ಎಚ್.ಸಿ.ಬೃಂದಾ ಎನ್. ಮಧುಮತಿ, ಸುರೇಶ್, ಅಧ್ಯಾಪಕೇತರರು, ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ಪ್ರತಿನಿಧಿಗಳಾದ ರಮ್ಯಾ ಡಿ, ಶಿವಾಲಿ, ಸುಚಿತ್ರಾ, ಸ್ನೇಹ, ಸೌಂದರ್ಯ, ರಂಜಿತ ಆರ್ ಸೇರಿದಂತೆ ಸುಮಾರು 200 ಸ್ವಯಂ ಸೇವಕರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago