ಮೈಸೂರು

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫ್ಯಾಕ್ಟರಿಯ ಮಾಲೀಕ ಗಣಪತ್ ಲಾಲ್ ಎಂಬವರನ್ನು ಹೆಚ್ಚಿನ ವಿಚಾರಣೆಗೆ ತನ್ನ ವಶಕ್ಕೆ ನೀಡಬೇಕು ಎಂದು ಎನ್‌ಸಿಬಿ ಅಧಿಕಾರಿಗಳು ಮೈಸೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ 41.218 ಕೆಜಿ ಕ್ರಿಸ್ಟಲಿನ್ ವಶಪಡಿಸಿಕೊಂಡಿದ್ದೇವೆ. ಅಲ್ಲದೇ, ಮೆಫೆಡ್ರಾನ್‌ಗೆ ಬದಲಿಯಾಗಿ ಬಳಕೆ ಮಾಡಲಾಗುತ್ತದೆ ಎನ್ನುವ ಶಂಕೆಯ ಮೇರೆಗೆ 1.28 ಕೆಜಿ ಕ್ರಿಸ್ಟಲ್ ಪೌಡರ್ ವಶಕ್ಕೆ ತಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕ್ರಿಸ್ಟಲಿನ್ ಎನ್ನುವ ವಸ್ತುವನ್ನು ಸೆಮಿ ಕಂಡಕ್ಟರ್ ತಯಾರಿಕೆ, ಮೈಕ್ರೋಚಿಪ್ ತಯಾರಿಕೆ, ಸೋಲಾರ್ ಸೆಲ್‌ಗಳ ತಯಾರಿಕೆಯಲ್ಲಿ ಸಾಮಗ್ರಿಯಾಗಿ ಉಪಯೋಗಿಸಲಾಗುತ್ತದೆ ಎನ್ನುವ ಪ್ರಾಥಮಿಕ ಮಾಹಿತಿ ಎಲ್ಲರಿಗೂ ಸಿಗುತ್ತದೆ. ಆದರೆ, ಇದನ್ನು ಮುಚ್ಚಿಟ್ಟು ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಎಲ್ಲಿಯೂ ಮೈಸೂರಿನಲ್ಲಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಲ್ಲ. ಆದರೆ, ಪತ್ರಿಕಾ ಪ್ರಕಟಣೆಯಲ್ಲಿ ಮಾತ್ರ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನಾ ಘಟಕ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳು ಇಲ್ಲಿನ ರಾಸಾಯನಿಕ ಉತ್ಪಾದನಾ ಕೈಗಾರಿಕೆ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡ ರಾಸಾಯನಿಕಗಳನ್ನು ತಯಾರಿಸುವ ಸೋಗಿನಲ್ಲಿ ಮಾದಕ ದ್ರವ್ಯ ತಯಾರಿಸುತ್ತಿದ್ದ ಶಂಕೆ ಮೇಲೆ ಸುಮಾರು 500 ಕೆಜಿ ರಾಸಾಯನಿಕವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಮೈಸೂರಿಗೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾ ಪ್ರಕಟಣೆಯನ್ನು ಇಟ್ಟುಕೊಂಡು ಮೈಸೂರು ಸಂಸದರು ತಲೆಬುಡ ಗೊತ್ತಿಲ್ಲದೇ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅವರ ಹಿರಿಯರು ಮೈಸೂರಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಮರ್ಯಾದೆಯನ್ನು ಇವರು ಕಳೆಯುತ್ತಿದ್ದಾರೆ. ಇವರು ಬಂದ ನಂತರ ಮೈಸೂರು- ಕುಶಾಲನಗರ ರೈಲ್ವೆ ಯೋಜನೆ, ಪ್ರಸಾದ್ ಯೋಜನೆ, ಯೂನಿಟಿ ಮಾಲ್ ಸೇರಿದಂತೆ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ಡ್ರಗ್ ಹಬ್ ಇರುವುದು ಉತ್ತರ ಭಾರತದಲ್ಲಿ. ಆದರೆ, ಮೈಸೂರು ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದಿನ ಎಂಪಿಗಿಂತ ಇವರು ಸುಳ್ಳು ಹೇಳುವುದರಲ್ಲಿ ಮುಂದೆ ಸಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮುಖಂಡರಾದ ಗಿರೀಶ್, ಕೆ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

37 mins ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

2 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

3 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

3 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

5 hours ago