ಮೈಸೂರು

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫ್ಯಾಕ್ಟರಿಯ ಮಾಲೀಕ ಗಣಪತ್ ಲಾಲ್ ಎಂಬವರನ್ನು ಹೆಚ್ಚಿನ ವಿಚಾರಣೆಗೆ ತನ್ನ ವಶಕ್ಕೆ ನೀಡಬೇಕು ಎಂದು ಎನ್‌ಸಿಬಿ ಅಧಿಕಾರಿಗಳು ಮೈಸೂರಿನ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುವ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ 41.218 ಕೆಜಿ ಕ್ರಿಸ್ಟಲಿನ್ ವಶಪಡಿಸಿಕೊಂಡಿದ್ದೇವೆ. ಅಲ್ಲದೇ, ಮೆಫೆಡ್ರಾನ್‌ಗೆ ಬದಲಿಯಾಗಿ ಬಳಕೆ ಮಾಡಲಾಗುತ್ತದೆ ಎನ್ನುವ ಶಂಕೆಯ ಮೇರೆಗೆ 1.28 ಕೆಜಿ ಕ್ರಿಸ್ಟಲ್ ಪೌಡರ್ ವಶಕ್ಕೆ ತಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಕ್ರಿಸ್ಟಲಿನ್ ಎನ್ನುವ ವಸ್ತುವನ್ನು ಸೆಮಿ ಕಂಡಕ್ಟರ್ ತಯಾರಿಕೆ, ಮೈಕ್ರೋಚಿಪ್ ತಯಾರಿಕೆ, ಸೋಲಾರ್ ಸೆಲ್‌ಗಳ ತಯಾರಿಕೆಯಲ್ಲಿ ಸಾಮಗ್ರಿಯಾಗಿ ಉಪಯೋಗಿಸಲಾಗುತ್ತದೆ ಎನ್ನುವ ಪ್ರಾಥಮಿಕ ಮಾಹಿತಿ ಎಲ್ಲರಿಗೂ ಸಿಗುತ್ತದೆ. ಆದರೆ, ಇದನ್ನು ಮುಚ್ಚಿಟ್ಟು ಮಾದಕ ವಸ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ ಎಂದು ಬಿಜೆಪಿಯವರು ಬಾಯಿ ಬಡಿದುಕೊಳ್ಳುತ್ತಿದ್ದಾರೆ ಎಂದು ದೂರಿದರು.

ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಎಲ್ಲಿಯೂ ಮೈಸೂರಿನಲ್ಲಿ ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿಲ್ಲ. ಆದರೆ, ಪತ್ರಿಕಾ ಪ್ರಕಟಣೆಯಲ್ಲಿ ಮಾತ್ರ ಮೈಸೂರಿನ ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಉತ್ಪಾದನಾ ಘಟಕ ನಡೆಸುತ್ತಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಎನ್‌ಸಿಬಿ ಅಧಿಕಾರಿಗಳು ಇಲ್ಲಿನ ರಾಸಾಯನಿಕ ಉತ್ಪಾದನಾ ಕೈಗಾರಿಕೆ ಮೇಲೆ ದಾಳಿ ನಡೆಸಿ, ಅತ್ಯಾಧುನಿಕ ಉಪಕರಣಗಳನ್ನು ಒಳಗೊಂಡ ರಾಸಾಯನಿಕಗಳನ್ನು ತಯಾರಿಸುವ ಸೋಗಿನಲ್ಲಿ ಮಾದಕ ದ್ರವ್ಯ ತಯಾರಿಸುತ್ತಿದ್ದ ಶಂಕೆ ಮೇಲೆ ಸುಮಾರು 500 ಕೆಜಿ ರಾಸಾಯನಿಕವನ್ನು ವಶಕ್ಕೆ ಪಡಿಸಿಕೊಳ್ಳಲಾಗಿದೆ ಎಂದು ಸುಳ್ಳು ಮಾಹಿತಿ ನೀಡಿ ಮೈಸೂರಿಗೆ ಕೆಟ್ಟ ಹೆಸರು ತರುತ್ತಿದ್ದಾರೆ ಎಂದು ಆರೋಪಿಸಿದರು.

ಈ ಪತ್ರಿಕಾ ಪ್ರಕಟಣೆಯನ್ನು ಇಟ್ಟುಕೊಂಡು ಮೈಸೂರು ಸಂಸದರು ತಲೆಬುಡ ಗೊತ್ತಿಲ್ಲದೇ ಸುಳ್ಳು ಮಾಹಿತಿ ನೀಡುತ್ತಿದ್ದಾರೆ. ಅವರ ಹಿರಿಯರು ಮೈಸೂರಿಗೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರ ಮರ್ಯಾದೆಯನ್ನು ಇವರು ಕಳೆಯುತ್ತಿದ್ದಾರೆ. ಇವರು ಬಂದ ನಂತರ ಮೈಸೂರು- ಕುಶಾಲನಗರ ರೈಲ್ವೆ ಯೋಜನೆ, ಪ್ರಸಾದ್ ಯೋಜನೆ, ಯೂನಿಟಿ ಮಾಲ್ ಸೇರಿದಂತೆ ಅನೇಕ ಯೋಜನೆಗಳು ಸ್ಥಗಿತಗೊಂಡಿವೆ. ಡ್ರಗ್ ಹಬ್ ಇರುವುದು ಉತ್ತರ ಭಾರತದಲ್ಲಿ. ಆದರೆ, ಮೈಸೂರು ಎಂದು ಸುಳ್ಳು ಹೇಳುತ್ತಿದ್ದಾರೆ. ಈ ಹಿಂದಿನ ಎಂಪಿಗಿಂತ ಇವರು ಸುಳ್ಳು ಹೇಳುವುದರಲ್ಲಿ ಮುಂದೆ ಸಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ಜಿಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ಮುಖಂಡರಾದ ಗಿರೀಶ್, ಕೆ.ಮಹೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

15 hours ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

15 hours ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

15 hours ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

18 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

18 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

18 hours ago