ಮೈಸೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎನ್ಡಿಎಗೆ ಪೂರ್ಣ ಪ್ರಮಾಣದ ಬಹುಮತ ದೊರೆಯುವುದಿಲ್ಲ. ಇಂಡಿಯಾ ಮೈತ್ರಿಗೆ ಈ ಬಾರಿ ಹೆಚ್ಚಿನ ಬಹುಮತ ಸಿಗಲಿದೆ. 400ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದ್ದೇವೆ ಎಂದು ಹೇಳುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ತಮ್ಮ ನಿವಾಸದಲ್ಲಿಂದು (ಏ.೧೩) ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಮೇಶ್ವರ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ ಎನ್ಐಎ ತಂಡ ಮತ್ತು ಕರ್ನಾಟಕ ಪೊಲೀಸರನ್ನು ಅಭಿನಂದಿಸಿರುವ ಸಿಎಂ, ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದರು.
ಇನ್ನು ನಾಳೆ ಮೋದಿ ಆಗಮನದ ಬಗ್ಗೆ ವ್ಯಂಗ್ಯವಾಡಿರುವ ಸಿಎಂ ಸಿದ್ದರಾಮಯ್ಯ, ಮೋದಿಯವರು ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ, ತೆರಿಗೆ ಹಂಚಿಕೆ, ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದರು.
ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂದು ಮೋದಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಹಾಗಾದರೆ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ. ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ ಎಂದು ಪ್ರಶ್ನಿಸಿದ ಸಿಎಂ ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ಸಾವರ್ಕರ್ ಹಾಗು ಗೋಲ್ವಾಲ್ಕರ್ ಅವರು ಭಾರತದ ಸಂವಿಧಾನವನ್ನು ವಿರೋಧಿಸಿದ್ದರು ಕಿಡಿಕಾರಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…