ಮೈಸೂರು: ಎಕ್ಸಿಟ್ ಪೋಲ್ಸ್ನಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಪರವಾಗಿ ಮುನ್ನಡೆ ಸಿಕ್ಕಿರುವುದು ಸಂತಸದ ವಿಷಯ. ಈ ಬಾರಿ ಎನ್ಡಿಎ ಅಧಿಕಾರಕ್ಕೆ ಬಂದರೆ ಜನರ ನಿರೀಕ್ಷೆಯಂತೆ ಕೆಲಸ ಮಾಡಲಾಗುವುದು ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಂತಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿಂದು (ಜೂನ್.2) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ದೇಶದ ಜನತೆ ಎನ್ಡಿಎಗೆ ಆಶೀರ್ವಾದ ಮಾಡಲಿದ್ದಾರೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಮೂರನೇ ಬಾರಿಗೆ ಪ್ರಧಾನಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಬಿಜೆಪಿ ಮುನ್ನಡೆ ವಿಚಾರಕ್ಕೆ ಸಂಬಂಧಿಸಿದಂತೆ, ನಮ್ಮೆಲ್ಲರ ನಿರೀಕ್ಷೆ ಮೀರಿದಂತೆ ಫಲಿತಾಂಶ ಬರಲಿದೆ. ನಾವು ಕೂಡಾ ಇದನ್ನೇ ನಿರೀಕ್ಷೆ ಮಾಡಿದ್ದೆವು. ಈ ಬಾರಿ ಮೈಸೂರು-ಕೊಡಗು ಕ್ಷೇತ್ರದಲ್ಲಿ ಗೆಲ್ಲುವ ವಿಶ್ವಾಸವಿದೆ. ಗೆದ್ದ ಬಳಿಕ ಕೇಂದ್ರ ಸ್ಥಾನಮಾನದ ಬಗ್ಗೆ ಚಿಂತಿಸುವುದಿಲ್ಲ ಬದಲಾಗಿ ಜನಪರ ಕೆಲಸಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಯದುವೀರ್ ತಿಳಿಸಿದರು.
ರಾಜ್ಯದ ಬಹಳಷ್ಟು ಜನರು ಆನ್ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ…
ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು…
ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು…
ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭…
ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ ಛತ್ತೀಸ್ಘಡದ ಭಿಲಾಯ್ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ…