ಮೈಸೂರು

ಬಿಹಾರದಲ್ಲಿ ಎನ್‌ಡಿಎ ಗೆಲುವು : ಮೈಸೂರು ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ಮೈಸೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಪ್ರಚಂಡ ಗೆಲವು ಸಾಧಿಸಿದ ಹಿನ್ನೆಲೆಯಲ್ಲಿ ನಗರದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು.

ಕಚೇರಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕದಿಂದ ನಡೆದ ಸಂಭ್ರಮಾಚರಣೆಯಲ್ಲಿ ಭಾಗಿಯಾದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಶಾಸಕ ಟಿ.ಎಸ್.ಶ್ರೀವತ್ಸ ಅವರ ನೇತೃತ್ವದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭ ಮಾತನಾಡಿದ ಶಾಸಕ ಟಿ.ಎಸ್. ಶ್ರೀವತ್ಸ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ಡಬಲ್ ಎಂಜಿನ್ ಸರ್ಕಾರಕ್ಕೆ ಮತದಾರರು ಗೆಲುವಿನ ಮುದ್ರೆ ಒತ್ತಿದ್ದಾರೆ. ನಿತೀಶ್ ಕುಮಾರ್ 20 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಗಮನಿಸಿ ಅಲ್ಲಿನ ಮತದಾರರು ಎನ್‌ಡಿಎಗೆ ಬೆಂಬಲ ನೀಡಿದ್ದಾರೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಅವರ ಪಕ್ಷದ ನಾಯಕರು ಮತಗಳ್ಳತನ ನಡೆಯುತ್ತಿದೆ ಎಂದು ಬೊಬ್ಬೆ ಹೊಡೆಯುತ್ತಿದ್ದರು. ಚುನಾವಣಾ ಆಯೋಗ ಇದರಲ್ಲಿ ಶಾಮೀಲಾಗಿದೆ ಎಂದು ಆರೋಪಿಸಿದ್ದರು. ಜತೆಗೆ ಚುನಾವಣೆ ಪ್ರಚಾರ ಸಂದರ್ಭ ಪ್ರಧಾನಿ ಮೋದಿ ಅವರ ತಾಯಿಯ ಬಗ್ಗೆ ಕೇವಲವಾಗಿ ಮಾತನಾಡಿದ್ದರು. ಇದರಿಂದ ಕೆರಳಿದ ಮತದಾರರು ಎನ್‌ಡಿಎ ಪರ ನಿಂತಿದ್ದಾರೆ ಎಂದರು.

ಇದನ್ನು ಓದಿ: ಬಿಹಾರ ಚುನಾವಣೆಯಲ್ಲಿ ಹಿನ್ನಡೆ : ಸಿಎಂ ಸಿದ್ದರಾಮಯ್ಯ ಹೇಳೋದೇನು?

ಬಿಹಾರದಲ್ಲಿ ಹಿಂದೆಂದಿಗಿಂತಲೂ ಭರ್ಜರಿ ಗೆಲವು ದಾಖಲಿಸಿದ್ದು, ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಸಲಾದ ಅಪಪ್ರಚಾರಗಳು ಫಲಿಸಿಲ್ಲ. ಅಪಪ್ರಚಾರಕ್ಕೆ ಸರಿಯಾದ ಉತ್ತರವನ್ನು ದೇಶದ ಜನ ನೀಡಿದ್ದಾರೆ, ಮುಂದೆಯೂ ನೀಡುತ್ತಾರೆ. ಚುನಾವಣಾ ಆಯೋಗ ಮತ ಕಳ್ಳತನ ಬಗ್ಗೆ ದೂರು ನೀಡಲು ತಿಳಿಸಿದ್ದರೂ ರಾಹುಲ್ ಗಾಂಧಿ ದೂರು ನೀಡಲು ಹೆದರಿದ್ದಾರೆ. ದೇಶದೆಲ್ಲೆಡೆ ಹಿಟ್ ಅಂಡ್ ರನ್ ಮಾತ್ರವೇ ಮಾಡಿದ್ದಾರೆ ಎಂದು ಹೇಳಿದರು.

ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಮಾತನಾಡಿ, ಬಿಹಾರದಲ್ಲಿ ಎನ್‌ಡಿಎ ಹಿಂದೆಂದಿಗಿಂತಲೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಕಾಂಗ್ರೆಸ್ ಅಪಪ್ರಚಾರಕ್ಕೆ ಉತ್ತರ ನೀಡಿದೆ. ಪ್ರಧಾನಿ ಮೋದಿ, ನಾಯಕರಾದ ಅಮಿತ್ ಶಾ ಮತ್ತು ಜೆ.ಪಿ.ನಡ್ಡಾ ಅವರ ನಾಯಕತ್ವದಲ್ಲಿ ಒಳ್ಳೆಯ ಫಲಿತಾಂಶ ಬಂದಿದ್ದು, ಕರ್ನಾಟಕದಲ್ಲಿ ಮುಂದೆ ನಡೆಯುವ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್. ಸುಬ್ಬಣ್ಣ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ನಾಯಕತ್ವದ ಆಡಳಿತಕ್ಕೆ ಮನ್ನಣೆ ನೀಡಿದ್ದಾರೆ. ರಾಹುಲ್ ಗಾಂಧಿ ಆಧಾರರಹಿತ ಆರೋಪಗಳಿಗೆ ಜನರು ಮತದಾನದ ಮೂಲಕ ಉತ್ತರ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಮುಂದಾದರೂ ಜವಾಬ್ದಾರಿಯಾಗಿ ವರ್ತಿಸಬೇಕು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅಽಕಾರ ಕಳೆದುಕೊಂಡು ಮನೆಗೆ ಹೋಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮುಖಂಡರಾದ ಕಿರಣ್ ಗೌಡ, ಜೋಗಿ ಮಂಜು, ಸಂತೋಷ್ ಕುಮಾರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

1 min ago

ಇ-ಕೆವೈಸಿಗೆ ಮುಗಿಬಿದ್ದ ಫಲಾನುಭವಿಗಳು

ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು.  ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…

6 mins ago

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

14 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

14 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

16 hours ago