ಮೈಸೂರು

ದಸರಾ ಆಚರಣೆಗೆ ಅಗತ್ಯ ಸಿದ್ಧತೆ: ಸಚಿವ ಹೆಚ್‌.ಸಿ ಮಹದೇವಪ್ಪ

ಮೈಸೂರು : ಈ ಬಾರಿ ನಾಡಿನಲ್ಲಿ ಉತ್ತಮವಾಗಿ ಮಳೆಯಾಗಿದ್ದು ಎಲ್ಲಾ ಜಲಾಶಯಗಳು ಭರ್ತಿಯಾಗಿವೆ. ಹೀಗಾಗಿ, ಮುಖ್ಯಮಂತ್ರಿಗಳು ಈ ಬಾರಿ ದಸರಾವನ್ನು ಅದ್ಧೂರಿಯಾಗಿ ಆಚರಿಸಲು ತಿಳಿಸಿದ್ದಾರೆ. ಅದರಂತೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಬುಧವಾರ ವಿರನಹೊಸಹಳ್ಳಿ ಬಳಿ ಗಜ ಪಯಣಕ್ಕೆ ಅಧಿಕೃತ ಚಾಲನೆ ನೀಡಿ ಅವರು ಮಾತನಾಡಿದರು.

ಇಂದು ಮೊದಲ ಹಂತದಲ್ಲಿ 9 ದಸರಾ ಆನೆಗಳು ಮೈಸೂರಿಗೆ ಆಗಮಿಸುತ್ತಿದ್ದು, ಅಭಿಮನ್ಯು ನೇತೃತ್ವದ ಕಂಜನ್, ಏಕಲವ್ಯ, ಭೀಮ, ಲಕ್ಷ್ಮೀ, ವರಲಕ್ಷ್ಮಿ, ರೋಹಿತ್, ಧನಂಜಯ ಹಾಗೂ ಗೋಪಿ ಆನೆಗಳು ಮೈಸೂರಿಗೆ ಆಗಮಿಸಲಿವೆ. ಮೈಸೂರಿನ ಅಶೋಕಪುರದ ಅರಣ್ಯ ಭವನದಲ್ಲಿ ವಾಸ್ತವ್ಯ ಹೂಡಿ, ಅಗಸ್ಟ್ 23 ರಂದು ಅರಮನೆಗೆ ಸ್ವಾಗತ ಮಾಡಿ ಆನೆಗಳನ್ನು ಬರಮಾಡಿಕೊಳ್ಳಲಾಗುವುದು ಎಂದರು.

ಆನೆ ಕಾಡಿನ ಸಂಪತ್ತು. ವನ್ಯ ಜೀವಿಗಳು ಹಾಗೂ ವನ್ಯ ಸಂರಕ್ಷಣೆ ದೇಶಕ್ಕೆ ಅತ್ಯಗತ್ಯ. ಪರಿಸರ ಸಂರಕ್ಷಣೆ ಹಾಗೂ ವನ್ಯ ಸಂರಕ್ಷಣೆ ಮಾಡದಿದ್ದರೆ ಮಾನವ ಉಳಿಯುವುದು ಕಷ್ಟ. ಈ ವರ್ಷ ಮೈಸೂರಿನಲ್ಲಿ 40 ಡಿಗ್ರಿ ವರೆಗೆ ಉಷ್ಣಾಂಶ ಇತ್ತು. ಇದಕ್ಕೆ ಕಾರಣ ಪರಿಸರವನ್ನು ಹಾಳು ಮಾಡುತ್ತಿರುವುದು. ಆದ್ದರಿಂದ ಪರಿಸರವನ್ನು ರಕ್ಷಿಸಲು ಎಲ್ಲರೂ ಪಣತೊಡಬೇಕು ಎಂದು ಸಚಿವರು ಕರೆ ನೀಡಿದರು.

ಅರ್ಜುನ ಆನೆ 14 ಬಾರಿ ದಸರಾದಲ್ಲಿ ಭಾಗವಹಿಸಿ, 9 ಬಾರಿ ಅಂಬಾರಿ ಹೊತ್ತಿತ್ತು. ಇಂದು ವೀರ ಮರಣ ಹೊಂದಿದೆ. ಮಾನವ ಹಾಗೂ ಪ್ರಾಣಿ ಸಂಘರ್ಷ ನಡೆಯಲು ಕಾರಣ ಅರಣ್ಯ ನಾಶ ಮತ್ತು ಒತ್ತುವರಿ ಮಾಡುತ್ತಿರುವುದು ಇದನ್ನು ತಡೆಗಟ್ಟಬೇಕು ಎಂದು ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

6 ತಿಂಗಳಿಂದ ಸಂಬಳ ಕೊಡದ ಸರ್ಕಾರ: ರಾಜೀನಾಮೆ ಕೊಟ್ಟ ವೈದ್ಯ

ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…

10 mins ago

ಸರಗೂರು ತಾಲ್ಲೂಕು ಕಚೇರಿಯಲ್ಲಿ ಆರ್‌ಡಿಎಕ್ಸ್‌ ಸ್ಫೋಟಕ ಇಟ್ಟಿರುವುದಾಗಿ ಬೆದರಿಕೆ

ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ…

51 mins ago

ಕುಂಬಳಕಾಯಿ ಕಳ್ಳ ಅಂದರೆ ಬಿಜೆಪಿಯವರು ಯಾಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ? ಸಿಎಂ ಸಿದ್ದರಾಮಯ್ಯ ಪ್ರಶ್ನೆ

ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…

56 mins ago

ಮೈಸೂರು| ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…

1 hour ago

ಬೆಂಗಳೂರಿಗಿಂತಲೂ ಬಳ್ಳಾರಿಯಲ್ಲಿ ದಿಢೀರ್‌ ಕುಸಿದ ಗಾಳಿಯ ಗುಣಮಟ್ಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…

2 hours ago

ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆ ತಂದಿಲ್ಲ: ಸಚಿವ ಪರಮೇಶ್ವರ್‌

ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…

2 hours ago