ಮೈಸೂರು

NEET RESULT : ತನ್ಮಯಿ ಪ್ರದೀಪ್ ಗೆ 1528ನೇ ರ‍್ಯಾಂಕ್‌

ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಸೆಂಟ್ ಥಾಮಸ್‌ ಸಿ.ಬಿ.ಎಸ್.ಇ ಪಿಯು‌ ಕಾಲೇಜಿನ ವಿದ್ಯಾರ್ಥಿನಿ ತನ್ಮಯಿ ಪ್ರದೀಪ್ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1528 ನೇ ರ‍್ಯಾಂಕ್ ಪಡೆದಿದ್ದಾರೆ.

ನಗರದ ಬೃಂದಾವನ‌ ಬಡಾವಣೆ ನಿವಾಸಿಯಾದ ಸಾಫ್ಟ್ ವೇರ್ ಎಂಜಿನಿಯರ್‌ ಪ್ರದೀಪ್ ನಾಗರಾಜ್ ಹಾಗೂ ರಾಧಾ ಸಿ.ಆರ್. ದಂಪತಿ‌ ಪುತ್ರಿಯಾದ ತನ್ಮಯಿ ಪ್ರದೀಪ್ ಭವಿಷ್ಯದಲ್ಲಿ ಮಕ್ಕಳ ಶಸ್ತ್ರಚಿಕಿತ್ಸೆಯಲ್ಲಿ ಪರಿಣಿತಿ ಪಡೆಯುವ ಹಂಬಲ‌‌ ಹೊಂದಿದ್ದಾರೆ. ತನ್ಮಯಿ ನೀಟ್ ಪರೀಕ್ಷೆಯಲ್ಲಿ 720 ಅಂಕಗಳಿಗೆ 598 ಅಂಕ ಪಡೆದಿದ್ದಾರೆ. ಆಕಾಶ್ ಇನ್ಸಿಟಿಟ್ಯೂಟ್‌ನಲ್ಲಿ ತರಬೇತಿ ಪಡೆದುಕೊಂಡಿದ್ದರು. ತನ್ಮಯಿ ಸಿಇಟಿಯಲ್ಲೂ ಉತ್ತಮ‌ ಸಾಧನೆ‌ ಮಾಡಿದ್ದಾರೆ.

ನೀಟ್ ನಲ್ಲಿ ಉತ್ತಮ ರ‍್ಯಾಂಕ್ ಪಡೆದ ಹಿನ್ನೆಲೆಯಲ್ಲಿ ಆಕಾಶ್ ಇನ್ಸ್ಟಿಟ್ಯೂಟ್ ಮೈಸೂರಿನ ಶಾಖೆಯಲ್ಲಿ ತನ್ಮಯಿ ಪ್ರದೀಪ್ ಹಾಗೂ ಅವರ ಪೋಷಕರನ್ನು ಸನ್ಮಾನಿಸಲಾಯಿತು.

ಈ ಬಾರಿ‌ ನೀಟ್ ಪ್ರಶ್ನೆ ಪತ್ರಿಕೆ ತುಂಬಾ ಕಠಿಣವಾಗಿತ್ತು. ಸ್ಕೋರ್ ಕಡಿಮೆಯಾದರೂ ಒಳ್ಳೆಯ ರ‍್ಯಾಂಕಿಂಗ್ ಬಂದಿದೆ. ನನ್ನ ರ‍್ಯಾಂಕಿಂಗ್‌ಗೆ ಏಮ್ಸ್‌ನಲ್ಲಿ ಸೀಟು ಸಿಗುವ ನಿರೀಕ್ಷೆ‌ ಇದೆ. ಭವಿಷ್ಯದಲ್ಲಿ‌ಮಕ್ಕಳ ತಜ್ಞೆಯಾಗುವ ಆಸೆ‌ ಇದೆ. ಆದರೆ, ಮುಂದೆ ಏನಾಗುತ್ತದೆ ಎಂಬುದು ಕಾದುನೋಡಬೇಕಿದೆ ಎಂದು  ತನ್ಮಯಿ ಪ್ರದೀಪ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

9 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

9 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

10 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

10 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

10 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

10 hours ago