ಮೈಸೂರು

ಮೈಸೂರು ವಿ.ವಿ ನಿರ್ಲಕ್ಷ್ಯ : ಮೊಬೈಲ್‌ ಬೆಳಕಿನಲ್ಲೇ ಮೌಲ್ಯಮಾಪನ ಮಾಡಿದ ಪ್ರಾಧ್ಯಾಪಕರು…!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ.

ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ ಮೂರು ದಿನಗಳ ಹಿಂದೆಯೇ ಸೆಸ್ಕ್ ನೀಡಿದ್ದ ಮಾಹಿತಿ ಪತ್ರಿಕೆಗಳಲ್ಲೂ ಪ್ರಕಟವಾಗಿತ್ತು. ಪೂರ್ವಸಿದ್ಧತೆಯನ್ನು ಮಾಡಿಕೊಳ್ಳದೆ ಮೈಸೂರು ವಿವಿ ನಿರ್ಲಕ್ಷ್ಯದಿಂದ ಮೌಲ್ಯಮಾಪಕರು ದಿನವಿಡೀ ಸಮಸ್ಯೆ ಎದುರಿಸುವಂತಾಯಿತು.

ಮೋಡವೂ ಕವಿದಿದ್ದರಿಂದ ಬೆಳಕಿರಲಿಲ್ಲ. ಕಿಟಕಿಗಳು ದೂರದಲ್ಲಿದ್ದವು. ವಯಸ್ಸಾದ ಪ್ರಾಧ್ಯಾಪಕರು ಮಂದ ಬೆಳಕಿನಲ್ಲಿ ಮೌಲ್ಯಮಾಪನ ಮಾಡುವಂತಾಯಿತು. ಬೆಳಕಿಲ್ಲದ ಕಾರಣ, ನಾಳೆ ಮೌಲ್ಯಮಾಪನ ಮಾಡುವುದಾಗಿ ಕೇಳಿಕೊಂಡರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಪರೀಕ್ಷಾಂಗ ವಿಭಾಗ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಜನರೇಟರ್ ಕೆಟ್ಟಿದೆ ಡೀಸೆಲ್ ಹಾಕಲೂ ವಿವಿಯಲ್ಲಿ ಹಣವಿಲ್ಲ ಎಂದು ನಿರ್ಲಕ್ಷದ ಮಾತುಗಳಿಂದ ವಿಧಿಯಿಲ್ಲದೇ ಮೌಲ್ಯಮಾಪನ ಮಾಡುವಂತಾಯಿತು ಎಂದು ಮೌಲ್ಯಮಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರ ಪ್ರದೇಶದ ಕಾಯಂ ಅಧ್ಯಾಪಕರು ಮೌಲ್ಯಮಾಪನ ಕಾರ್ಯಕ್ಕೆ ಬರುತ್ತಿಲ್ಲ. ಗ್ರಾಮೀಣ ಪ್ರದೇಶದ ಕಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರಿಂದಲೇ ಮೌಲ್ಯಮಾಪನ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬ ಪ್ರಾಧ್ಯಾಪಕರು ಕಡ್ಡಾಯವಾಗಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳಬೇಕೆಂಬ ಕ್ರಮಕ್ಕೂ ವಿವಿ ಮುಂದಾಗುತಿಲ್ಲ ಎಂದು ಅಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

4 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

5 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

6 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

7 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

7 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

7 hours ago