ಮೈಸೂರು

ಮೈಸೂರು ವಿ.ವಿ ನಿರ್ಲಕ್ಷ್ಯ : ಮೊಬೈಲ್‌ ಬೆಳಕಿನಲ್ಲೇ ಮೌಲ್ಯಮಾಪನ ಮಾಡಿದ ಪ್ರಾಧ್ಯಾಪಕರು…!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ.

ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ ಮೂರು ದಿನಗಳ ಹಿಂದೆಯೇ ಸೆಸ್ಕ್ ನೀಡಿದ್ದ ಮಾಹಿತಿ ಪತ್ರಿಕೆಗಳಲ್ಲೂ ಪ್ರಕಟವಾಗಿತ್ತು. ಪೂರ್ವಸಿದ್ಧತೆಯನ್ನು ಮಾಡಿಕೊಳ್ಳದೆ ಮೈಸೂರು ವಿವಿ ನಿರ್ಲಕ್ಷ್ಯದಿಂದ ಮೌಲ್ಯಮಾಪಕರು ದಿನವಿಡೀ ಸಮಸ್ಯೆ ಎದುರಿಸುವಂತಾಯಿತು.

ಮೋಡವೂ ಕವಿದಿದ್ದರಿಂದ ಬೆಳಕಿರಲಿಲ್ಲ. ಕಿಟಕಿಗಳು ದೂರದಲ್ಲಿದ್ದವು. ವಯಸ್ಸಾದ ಪ್ರಾಧ್ಯಾಪಕರು ಮಂದ ಬೆಳಕಿನಲ್ಲಿ ಮೌಲ್ಯಮಾಪನ ಮಾಡುವಂತಾಯಿತು. ಬೆಳಕಿಲ್ಲದ ಕಾರಣ, ನಾಳೆ ಮೌಲ್ಯಮಾಪನ ಮಾಡುವುದಾಗಿ ಕೇಳಿಕೊಂಡರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಪರೀಕ್ಷಾಂಗ ವಿಭಾಗ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಜನರೇಟರ್ ಕೆಟ್ಟಿದೆ ಡೀಸೆಲ್ ಹಾಕಲೂ ವಿವಿಯಲ್ಲಿ ಹಣವಿಲ್ಲ ಎಂದು ನಿರ್ಲಕ್ಷದ ಮಾತುಗಳಿಂದ ವಿಧಿಯಿಲ್ಲದೇ ಮೌಲ್ಯಮಾಪನ ಮಾಡುವಂತಾಯಿತು ಎಂದು ಮೌಲ್ಯಮಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರ ಪ್ರದೇಶದ ಕಾಯಂ ಅಧ್ಯಾಪಕರು ಮೌಲ್ಯಮಾಪನ ಕಾರ್ಯಕ್ಕೆ ಬರುತ್ತಿಲ್ಲ. ಗ್ರಾಮೀಣ ಪ್ರದೇಶದ ಕಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರಿಂದಲೇ ಮೌಲ್ಯಮಾಪನ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬ ಪ್ರಾಧ್ಯಾಪಕರು ಕಡ್ಡಾಯವಾಗಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳಬೇಕೆಂಬ ಕ್ರಮಕ್ಕೂ ವಿವಿ ಮುಂದಾಗುತಿಲ್ಲ ಎಂದು ಅಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಣರಂಗದಿಂದ ಪಲಾಯನಕ್ಕೆ ಟ್ರಂಪ್ ಸಿದ್ಧತೆ..!

ಅನಗತ್ಯವಾಗಿ ಮತ್ತು ಅಪ್ರಚೋದಿತವಾಗಿ ಇರಾನ್ ವಿರುದ್ಧ ಯುದ್ಧಕ್ಕಿಳಿದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸ್ಥಿತಿ ಈಗ ಮಹಾಭಾರತದ ಅಭಿಮನ್ಯುವಿನ ಪರಿಸ್ಥಿತಿಯಂತಾಗಿದೆ.…

37 mins ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ವಿರೋಧಿ ಸಿದ್ಧಾಂತದ ರಾಜ್ಯಗಳ ಜತೆ ಬಿಜೆಪಿ ಸೆಣಸಾಟ

೨೦೨೬ರ ಐದು ರಾಜ್ಯಗಳ ವಿಧಾನಸಭೆ ಚುನಾವಣೆಯ ಅಖಾಡ ಈಗ ಸಿದ್ಧವಾಗಿದೆ. ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು…

44 mins ago

ಗಂಡಸಿನ ಕೋಪ ಹೊಳೆ ಸಾಗರ… ಹೆಂಗಸಿನ ಕೋಪ ಗುಂಡಿ ನೀರು

ಅನಿಲ್ ಅಂತರಸಂತೆ ಹಳ್ಳಿ ಸೊಗಡಿನ ದೇಸಿ ಕಂಠಸಿರಿಯಲ್ಲಿ ಇವರ ಜಾನ ಪದ ಹಾಡುಗಳನ್ನು ಕೇಳುವುದೇ ಬಲು ಹಿತಕರ. ಮೂಲತಃ ಎಚ್.ಡಿ.ಕೋಟೆ…

50 mins ago

ಒಂದು ಹಸಿ ಅಸಹ್ಯ ಹಾಡಿನ ಕುರಿತು ಇಬ್ಬರು ಬರಹಗಾರ್ತಿಯರು

ಇಂತಹ ಸಂದರ್ಭಗಳಲ್ಲಿ ಮೌನವಾಗಿರುವುದು ಅಪರಾಧದಲ್ಲಿ ಪಾಲುಗಾರರಾದಂತೆಯೇ ಸಂಧ್ಯಾರಾಣಿ, ಲೇಖಕಿ ಮತ್ತು ಚಿತ್ರ ಸಾಹಿತಿ ‘ರ’ ಚಿತ್ರದ ಹಾಡಿನ ಬಗ್ಗೆ ವಿರೋಧ,…

54 mins ago

ಕೆಟ್ಟ ಯುದ್ಧವೊಂದರ ಕೆಲವು ಒಳ್ಳೆಯ ಅಡ್ಡ ಪರಿಣಾಮಗಳು

ಶೇಷಾದ್ರಿ ಗಂಜೂರು ಮಧ್ಯಪ್ರಾಚ್ಯದಿಂದ ಪ್ರತಿನಿತ್ಯ ವಿಸ್ತರಿಸುತ್ತಿರುವ ಉದ್ವಿಗ್ನತೆಯನ್ನು ಗಮನಿಸಿದರೆ, ಇಸ್ರೇಲಿನ ಆಕ್ರಮಣಕಾರಿ ಧೋರಣೆ, ಅಮೆರಿಕದ ಟ್ರಂಪ್ ದುರಾಡಳಿತದ ತರ್ಕರಹಿತ ನಡೆಗಳು…

1 hour ago

ಮಾನವ-ವನ್ಯಪ್ರಾಣಿ ಸಂಘರ್ಷ ನಿವಾರಣೆಗೆ ಕಾರ್ಯತಂತ್ರ

ನವೀನ್ ಡಿಸೋಜ ಮಡಿಕೇರಿ: ವನ್ಯಜೀವಿ-ಮಾನವ ಸಂಘರ್ಷ ತಡೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕ ಮಾನವ -…

1 hour ago