ಮೈಸೂರು

ಮೈಸೂರು ವಿ.ವಿ ನಿರ್ಲಕ್ಷ್ಯ : ಮೊಬೈಲ್‌ ಬೆಳಕಿನಲ್ಲೇ ಮೌಲ್ಯಮಾಪನ ಮಾಡಿದ ಪ್ರಾಧ್ಯಾಪಕರು…!

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ಕಾರ್ಯಸೌಧ ಕ್ರಾಫರ್ಡ್‌ಭವನದ ಪರೀಕ್ಷಾ ಭವನದಲ್ಲಿ ಗುರುವಾರ ವಿದ್ಯುತ್ ವ್ಯತ್ಯಯದಿಂದಾಗಿ ಮೊಬೈಲ್‌ ಫೋನ್ ಬೆಳಕಿನಲ್ಲಿಯೇ ಮೌಲ್ಯಮಾಪಕರು ಪದವಿ ಪರೀಕ್ಷೆಗಳ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ನಡೆಸಿದ ಸಂಗತಿ ಬಹಿರಂಗವಾಗಿದೆ.

ಕಲಾಮಂದಿರ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿರುವ ಬಗ್ಗೆ ಮೂರು ದಿನಗಳ ಹಿಂದೆಯೇ ಸೆಸ್ಕ್ ನೀಡಿದ್ದ ಮಾಹಿತಿ ಪತ್ರಿಕೆಗಳಲ್ಲೂ ಪ್ರಕಟವಾಗಿತ್ತು. ಪೂರ್ವಸಿದ್ಧತೆಯನ್ನು ಮಾಡಿಕೊಳ್ಳದೆ ಮೈಸೂರು ವಿವಿ ನಿರ್ಲಕ್ಷ್ಯದಿಂದ ಮೌಲ್ಯಮಾಪಕರು ದಿನವಿಡೀ ಸಮಸ್ಯೆ ಎದುರಿಸುವಂತಾಯಿತು.

ಮೋಡವೂ ಕವಿದಿದ್ದರಿಂದ ಬೆಳಕಿರಲಿಲ್ಲ. ಕಿಟಕಿಗಳು ದೂರದಲ್ಲಿದ್ದವು. ವಯಸ್ಸಾದ ಪ್ರಾಧ್ಯಾಪಕರು ಮಂದ ಬೆಳಕಿನಲ್ಲಿ ಮೌಲ್ಯಮಾಪನ ಮಾಡುವಂತಾಯಿತು. ಬೆಳಕಿಲ್ಲದ ಕಾರಣ, ನಾಳೆ ಮೌಲ್ಯಮಾಪನ ಮಾಡುವುದಾಗಿ ಕೇಳಿಕೊಂಡರೂ ಅಧಿಕಾರಿಗಳು ಸ್ಪಂದಿಸಲಿಲ್ಲ. ಪರೀಕ್ಷಾಂಗ ವಿಭಾಗ ಪರ್ಯಾಯ ವ್ಯವಸ್ಥೆ ಮಾಡಿರಲಿಲ್ಲ. ಜನರೇಟರ್ ಕೆಟ್ಟಿದೆ ಡೀಸೆಲ್ ಹಾಕಲೂ ವಿವಿಯಲ್ಲಿ ಹಣವಿಲ್ಲ ಎಂದು ನಿರ್ಲಕ್ಷದ ಮಾತುಗಳಿಂದ ವಿಧಿಯಿಲ್ಲದೇ ಮೌಲ್ಯಮಾಪನ ಮಾಡುವಂತಾಯಿತು ಎಂದು ಮೌಲ್ಯಮಾಪಕರೊಬ್ಬರು ಬೇಸರ ವ್ಯಕ್ತಪಡಿಸಿದ್ದಾರೆ.

ನಗರ ಪ್ರದೇಶದ ಕಾಯಂ ಅಧ್ಯಾಪಕರು ಮೌಲ್ಯಮಾಪನ ಕಾರ್ಯಕ್ಕೆ ಬರುತ್ತಿಲ್ಲ. ಗ್ರಾಮೀಣ ಪ್ರದೇಶದ ಕಾಯಂ ಪ್ರಾಧ್ಯಾಪಕರು ಹಾಗೂ ಅತಿಥಿ ಉಪನ್ಯಾಸಕರಿಂದಲೇ ಮೌಲ್ಯಮಾಪನ ಮಾಡಿಸಲಾಗುತ್ತಿದೆ. ಪ್ರತಿಯೊಬ್ಬ ಪ್ರಾಧ್ಯಾಪಕರು ಕಡ್ಡಾಯವಾಗಿ ಮೌಲ್ಯಮಾಪನದಲ್ಲಿ ಪಾಲ್ಗೊಳ್ಳಬೇಕೆಂಬ ಕ್ರಮಕ್ಕೂ ವಿವಿ ಮುಂದಾಗುತಿಲ್ಲ ಎಂದು ಅಧ್ಯಾಪಕರೊಬ್ಬರು ಆರೋಪಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ದೂರ ಗ್ರಾಮಕ್ಕೆ ನಟ ಪ್ರಭುದೇವ ಭೇಟಿ

ದೂರ: ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ದೂರ ಗ್ರಾಮಕ್ಕೆ ಖ್ಯಾತ ನಟ, ನಿರ್ದೇಶಕ ಪ್ರಭುದೇವ ಶನಿವಾರ ಆಗಮಿಸಿದ್ದರು. ಅವರು ಮೊದಲು…

5 hours ago

ಸೌದಿ ಅರಾಮ್ಕೊ ತೈಲ ಕಂಪನಿಯ ಹೆಲಿಕಾಪ್ಟರ್‌ ಪತನ: 14 ಮಂದಿ ದುರ್ಮರಣ

ರಿಯಾಧ್:‌ ಸೌದಿ ಅರಾಮ್ಕೊ ತೈಲ ಕಂಪನಿಗೆ ಸೇರಿದ ಹೆಲಿಕಾಪ್ಟರ್‌ ಅಪಘಾತಕ್ಕೀಡಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದಾರೆ. ಸೌದಿ ಅರೇಬಿಯಾದ ರಾಸ್‌…

6 hours ago

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 hours ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

7 hours ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

7 hours ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

8 hours ago