ಮೈಸೂರು: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ರಾಜಕಾರಣಿಗಳು ವಿವಿಧ ಹೇಳಿಕೆಗಳನ್ನು ನೀಡುತ್ತಿದ್ದು, ಸದ್ಯ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಸಹ ಈ ಕುರಿತು ಹೇಳಿಕೆಯನ್ನು ನೀಡಿದ್ದಾರೆ.
ನಗರದಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಸುಮಲತಾ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದಾಗ ನೇಹಾ ಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ ʼನಾನೂ ಸಹ ಈ ವಿಚಾರವನ್ನು ಗಮನಿಸಿದ್ದೇನೆ. ಸಾಮಾಜಿಕ ಜಾಲತಾಣದಲ್ಲಿ ಒಂದಷ್ಟು ಫೋಟೊಗಳು ಹರಿದಾಡುತ್ತಿವೆ. ಈಗಾಗಲೇ ಆಕೆಯ ಹತ್ಯೆಯಾಗಿದೆ, ಆ ಜೀವ ನೊಂದಿದೆ. ಇಂತಹ ಸಂದರ್ಭದಲ್ಲಿ ಆಕೆಯ ಕ್ಯಾರೆಕ್ಟರ್ ಬಗ್ಗೆ ಮಾತನಾಡುವುದು ಬಹಳ ನೋವಿನ ವಿಚಾರʼ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು ʼಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಸಮುದಾಯವನ್ನೇ ತಪ್ಪು ಎನ್ನುವುದು ಸರಿಯಲ್ಲ. ಆದರೆ ಒಂದು ಸಮುದಾಯವನ್ನು ಸಮರ್ಥನೆ ಮಾಡಿಕೊಳ್ಳುವುದು ತಪ್ಪು. ಪಾಕಿಸ್ತಾನ್ ಜಿಂದಾಬಾದ್ ಕೂಗಿದ್ದ ಪ್ರಕರಣದಲ್ಲಿ ಎಫ್ಎಸ್ಎಲ್ ವರದಿ ಬರುವ ಮುನ್ನವೇ ಸಮರ್ಥನೆ ಮಾಡಿಕೊಂಡ್ರಿ. ಈಗ ಇದು ವೈಯಕ್ತಿಕ ಕಾರಣಕ್ಕೆ ಆಗಿರುವ ಕೊಲೆ ಎನ್ನುವುದು ತಪ್ಪು. ತಕ್ಷಣ ಸರ್ಕಾರ ಕ್ರಮ ಕೈಗೊಳ್ಳಬೇಕುʼ ಎಂದು ಹೇಳಿದರು.
ಈ ಮೂಲಕ ಈ ಹಿಂದೆ ಸಿಎಂ ಸಿದ್ದರಾಮಯ್ಯ ವೈಯಕ್ತಿಕ ಕಾರಣಕ್ಕೆ ನೇಹಾ ಕೊಲೆಯಾಗಿದೆ ಎಂದು ನೀಡಿದ್ದ ಹೇಳಿಕೆಗೆ ಸುಮಲತಾ ಟಾಂಗ್ ಕೊಟ್ಟಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…