ಮೈಸೂರು

ಬಿಜೆಪಿ ವಕ್ತಾರೆ ಸ್ಥಾನದಿಂದ ನೇಹಾ ಶಾಲಿನಿ ದುವಾ ವಜಾ!

ನವದೆಹಲಿ: ದೆಹಲಿ ಬಿಜೆಪಿ ಘಟಕ ಬುಧವಾರ ನೇಹಾ ಶಾಲಿನಿ ದುವಾ ಅವರನ್ನು ವಕ್ತಾರೆ ಸ್ಥಾನದಿಂದ ತೆಗೆದುಹಾಕಿದೆ. ಜಿಎಸ್‌ಟಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಾಗ ಅಧಿಕೃತ ಪಕ್ಷದ ನಿಯಮ ಉಲ್ಲಂಘನೆ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಇದರ ವಿರುದ್ಧ ವಾಗ್ದಾಳಿ ನಡೆಸಿರುವ ದುವಾ ದೆಹಲಿ ಬಿಜೆಪಿ ಘಟಕದ ಕೆಲ ನಾಯಕರು ಪೂರ್ವಗ್ರಹ ಪೀಡಿತರು ಎಂದಿದ್ದು, ತಮ್ಮ ವಿರುದ್ಧದ ಕ್ರಮವನ್ನು ಕೇಂದ್ರದ ವರಿಷ್ಠರು ಗಮನಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪದೇ ಪದೇ ಪಕ್ಷದ ರೇಖೆ ಉಲ್ಲಂಘಿಸಿದ್ದಕ್ಕಾಗಿ ನೇಹಾ ಶಾಲಿನಿ ದುವಾ ಅವರನ್ನು ದೆಹಲಿ ಬಿಜೆಪಿ ವಕ್ತಾರೆ ಹುದ್ದೆಯಿಂದ ತಕ್ಷಣವೇ ಬಿಡುಗಡೆ ಮಾಡಿದೆಎಂದು ದೆಹಲಿ ಬಿಜೆಪಿಯ ಮಾಧ್ಯಮ ವಿಭಾಗ ಹೇಳಿಕೆಯಲ್ಲಿ ತಿಳಿಸಿದೆ.

“ಈ ಹಿಂದೆಯೂ ನೀವು ಪಕ್ಷದ ರೇಖೆಯನ್ನು ಉಲ್ಲಂಘಿಸಿದ್ದೀರಿ. ಇಂದು ಕೂಡಾ ಜಿಎಸ್‌ಟಿ ಕುರಿತ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದೀರಿ ಅದು ಪಕ್ಷದ ಅಧಿಕೃತ ನಿಲುವಲ್ಲ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಬುಧವಾರ ದುವಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ದೆಹಲಿ ಬಿಜೆಪಿ ಅಧ್ಯಕ್ಷರ ಆದೇಶದ ಪ್ರಕಾರ ವಕ್ತಾರೆ ಹುದ್ದೆಯಿಂದ ದುವಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಅವರು ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುವುದನ್ನು ಮುಂದುವರಿಸಬಹುದು ಪತ್ರದಲ್ಲಿ ಅವರು ಹೇಳಿದ್ದಾರೆ.

andolanait

Recent Posts

ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣ: ಮಹದೇಶ್ವರ ಬೆಟ್ಟಕ್ಕೆ ಹೋಗದಂತೆ ಇಮ್ಮಡಿ ಮಹದೇವಸ್ವಾಮಿಗೆ ನಿರ್ಬಂಧ

ಚಾಮರಾಜನಗರ: ಸುಳ್ವಾಡಿ ವಿಷಪ್ರಸಾದ ದುರಂತ ಪ್ರಕರಣದ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಮಲೆ ಮಹದೇಶ್ವರ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು…

8 mins ago

ಶಿವಮೊಗ್ಗ| ಮಂಗನ ಕಾಯಿಲೆಗೆ ಯುವಕ ಬಲಿ

ಶಿವಮೊಗ್ಗ: ಮಂಗನ ಕಾಯಿಲೆ ಸೋಂಕಿನಿಂದ ಬಳಲುತ್ತಿದ್ದ ತೀರ್ಥಹಳ್ಳಿ ತಾಲ್ಲೂಕಿನ 29 ವರ್ಷದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಸಸಿ ತೋಟದ…

30 mins ago

ಪಂಚಭೂತಗಳಲ್ಲಿ ಲೀನರಾದ ಅಜಿತ್‌ ಪವಾರ್‌

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ…

2 hours ago

ನಾನು ರಾಜೀನಾಮೆ ನೀಡಲು ಮುಂದಾಗಿಲ್ಲ: ಸಚಿವ ಕೆ.ಜೆ.ಜಾರ್ಜ್‌ ಸ್ಪಷ್ಟನೆ

ಬೆಂಗಳೂರು: ಇಂದಿನ ಇಲಾಖೆಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಹಸ್ತಕ್ಷೇಪ ಮಾಡುತ್ತಿದ್ದಾರೆಂದು ಬೇಸರಗೊಂಡು ಸಚಿವ ಕೆ.ಜೆ.ಜಾರ್ಜ್‌ ಸಿಎಂ ಸಿದ್ದರಾಮಯ್ಯ…

2 hours ago

ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ಕುಡಿದು ವಾಹನ ಚಾಲನೆ ಮಾಡಿ ಕಾರ್‌ಗಳಿಗೆ ಸರಣಿ ಅಪಘಾತ ಉಂಟು ಮಾಡಿದ ನಟ ಮಯೂರ್‌ ಪಟೇಲ್‌ ವಿರುದ್ಧ ಎಫ್‌ಐಆರ್‌…

2 hours ago

ಮೈಸೂರಿನಲ್ಲಿ ಮುಂದುವರೆದ ಕಾಡು ಪ್ರಾಣಿಗಳ ಹಾವಳಿ

ಮೈಸೂರು: ಜಿಲ್ಲೆಯಲ್ಲಿ ಕಾದು ಪ್ರಾಣಿಗಳ ಹಾವಳಿ ಮುಂದುವರಿದಿದ್ದು, ಕಣಿಯನಹುಂಡಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಗ್ರಾಮದ ಕೃಷ್ಣ ಎಂಬುವವರ ಜಮೀನಿನಲ್ಲಿ ಚಿರತೆ…

2 hours ago