ಮೈಸೂರು

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ. ಸದಾ ನನ್ನೊಂದಿಗೆ ಇರುತ್ತಾರೆ,ಮುಂದೆಯೂ ಇರುತ್ತಾರೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟದಲ್ಲಿ ಅವಕಾಶ ಸಿಗದಿದ್ದಕ್ಕೆ ನಿರಾಶೆಯಾಗುವ ಪ್ರಶ್ನೆಯೇ ಇಲ್ಲ. ಪೂರ್ಣ ಪ್ರಮಾಣದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವಾಗ ಸಿಗುವ ನಿರೀಕ್ಷೆ ಇದೆ. ಸಿಗುತ್ತದೆ ಎನ್ನುವ ವಿಶ್ವಾಸವನ್ನು ಇಟ್ಟುಕೊಂಡಿದ್ದೇವೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ವೈಮನಸ್ಸು ಇಲ್ಲ. ಸದಾ ನನ್ನೊಂದಿಗೆ ಇದ್ದೇ ಇರುತ್ತಾರೆ. ನಮ್ಮ ಪರವಾಗಿಲ್ಲ ಎಂದು ಹೇಳಬಾರದು. ನನ್ನ ಪರವಾಗಿ ಬಲವಾಗಿ ವಾದ ಮಾಡಿಲ್ಲ ಎನ್ನುವುದು ಸರಿಯಲ್ಲ. ಡಾ.ಯತೀಂದ್ರ ಕೂಡ ನಮ್ಮ ಮಗನಿದ್ದಂತೆ. ನಾನು-ಸಿದ್ದರಾಮಯ್ಯ 40 ವರ್ಷಗಳ ಕಾಲ ಜತೆಯಾಗಿದ್ದಂತೆ ಡಾ.ಯತೀಂದ್ರ ಹಾಗೂ ಸುನಿಲ್ ಬೋಸ್ ಜತೆಯಾಗಿದ್ದಾರೆ. ನನ್ನ ಸಿದ್ಧಾಂತ, ಹೋರಾಟಗಳನ್ನು ಮುಂದುವರಿಸಿಕೊಂಡು ಹೋಗುವ ವಿಶ್ವಾಸ ಇದೆ ಎಂದರು.

ಕರ್ನಾಟಕದಲ್ಲಿ ದಲಿತ ನಾಯಕತ್ವದಲ್ಲಿ ಮುಂಚೂಣಿಯಲ್ಲಿರುವ ಡಾ.ಎಚ್.ಸಿ.ಮಹದೇವಪ್ಪರಿಗೆ ಸಚಿವ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಬೆಂಗಳೂರಿನಲ್ಲಿ ನಡೆದ ಹೋರಾಟ ಪಕ್ಷಾತೀತವಾಗಿ,ಜಾತ್ಯತೀತವಾಗಿತ್ತು. ಒಬ್ಬ ಹೋರಾಟಗಾರ,ಸೈದ್ಧಾಂತಿಕ ನಾಯಕನಿಗೆ ಅವಕಾಶ ಸಿಗದೆ ಇರುವ ಬಗ್ಗೆ ಸ್ವಾಭಾವಿಕವಾಗಿ ನಾಯಕರು ತಂತಮ್ಮ ಅಭಿಪ್ರಾಯಗಳನ್ನು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ ಯಾರು ಮನಸ್ತಾಪ ಇಟ್ಟುಕೊಂಡಿಲ್ಲ. ನಾಯಕರು ತಮ್ಮ ಜವಾಬ್ದಾರಿಗೆ ತಕ್ಕಂತೆ ಮಾತನಾಡಿದ್ದಾರೆ ಎಂದರು.

ಅಧಿಕಾರ,ಮಂತ್ರಿಗಿರಿಗಿಂತಲೂ ಇಂದು ಸಂವಿಧಾನ, ಪ್ರಜಾಪ್ರಭುತ್ವದ ರಕ್ಷಣೆಗೆ ಹೋರಾಟ ಮಾಡಬೇಕಾಗಿದೆ. ಸಂವಿಧಾನ ಸಂದಿಗ್ಧ ಸ್ಥಿತಿಯಲ್ಲಿ ಸಿಲುಕಿದೆ. ಎಸ್‌ಐಆರ್ ನೆಪದಲ್ಲಿ ಮತದಾರರ ಹಕ್ಕನ್ನು ಕಸಿಯುವ ಹುನ್ನಾರವನ್ನು ಕೇಂದ್ರದ ಬಿಜೆಪಿ ಸರ್ಕಾರ, ಕೇಂದ್ರ ಚುನಾವಣಾ ಆಯೋಗ ಮಾಡುತ್ತಿದೆ. ಪಶ್ಚಿಮಬಂಗಾಳ ನಂತರ ಕರ್ನಾಟಕದಲ್ಲೂ ಮತದಾರರ ಹಕ್ಕನ್ನು ಕಸಿಯುವ ಕೆಲಸಕ್ಕೆ ಕೈ ಹಾಕಿರುವುದರ ವಿರುದ್ದ ನಮ್ಮ ಹೋರಾಟವಿದೆ ಎಂದರು.

ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಲಿದೆ. ಸಂಪುಟಕ್ಕೆ ಸೇರುವ ಬಗ್ಗೆ ಯಾರ ಬಳಿಗೂ ಹೋಗಲ್ಲ ಎಂದು ಸಮರ್ಥಿಸಿಕೊಂಡರು. ಜಾ.ದಳ ರಚನೆಯಾದಾಗ ಬಿಜೆಪಿ ಹಾಗೂ ಕಾಂಗ್ರೆಸ್ ವಿರುದ್ಧದ ರಾಜಕೀಯ ಸ್ಪಷ್ಟ ಸಿದ್ಧಾಂತವಾಗಿತ್ತು. ಆದರೆ,ಒಂದು ಬಾರಿ ಕಾಂಗ್ರೆಸ್‌ನೊಂದಿಗೆ, ಇನ್ನೊಂದು ಬಾರಿ ಬಿಜೆಪಿಯೊಂದಿಗೆ ಕೈ ಜೋಡಿಸಿ ಅಧಿಕಾರ ಮಾಡಿರುವ ಕಾರಣ ಯಾವ ತತ್ವ,ಸಿದ್ಧಾಂತ ಇಲ್ಲದಂತಾಗಿದೆ ಎಂದು ಟೀಕಿಸಿದರು.

ಮೊದಲನೇ ಹಂತದಲ್ಲಿ ಮಂತ್ರಿ ಸ್ಥಾನ ಸಿಗದಿದ್ದಕ್ಕೆ ಮೊದಲ ಸಾಲಿನಿಂದ ಎರಡನೇ ಸಾಲಿನ ನಾಯಕರ ಮಟ್ಟಕ್ಕೆ ಬಂದರೆಂದು ಹೇಳಲಾಗುತ್ತಿದೆಯಲ್ಲಾ ಎನ್ನುವ ಪ್ರಶ್ನೆಗೆ, ನಾನು ಸದಾ ಮೊದಲ ಸಾಲಿನಲ್ಲಿ ಇರುವವನು. ಎರಡನೇ ಸಾಲಿಗೆ ಬರುವ ಮಾತೇ ಇಲ್ಲ. ಸಂಪುಟಕ್ಕೆ ಸೇರದಿದ್ದಕ್ಕೆ ಎರಡನೇ ಸಾಲಿನ ನಾಯಕರಾಗಿ ಬಿಡುವುದಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

28 mins ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

60 mins ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

1 hour ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

1 hour ago

ಮಹಾಪಂಚ್ ಕಾರ್ಟೂನ್‌

ಮಹಾಪಂಚ್ ಕಾರ್ಟೂನ್‌ | ಸೆಪ್ಟಂಬರ್‌ 18 ಶುಕ್ರವಾರ

2 hours ago