ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ತಾಲ್ಲೂಕಾಧಿಕಾರಿಗಳಿಗೆ ತಿಳಿಸಿದ್ದು, ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಘಟನೆಯ ಬಗ್ಗೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ದೀಪಾ ಅವರು ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ ನವಜಾತ ಶಿಶುವೊಂದು ಜೀವಂತ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆಯಾಗಿದೆ. ಆ ಮಗುವಿಗೆ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಮಗುವನ್ನ ಜಿಲ್ಲಾ ಮಕ್ಕಳ ಸಮಿತಿ ಮುಂದೆ ಹಾಜರುಪಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದರು.
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…
ಬೆಂಗಳೂರು: ಕಚೇರಿಯಲ್ಲಿ ಮಹಿಳೆಯರೊಂದಿಗೆ ರಾಮಚಂದ್ರರಾವ್ ಅನುಚಿತ ವರ್ತನೆ ಕುರಿತ ವೈರಲ್ ವಿಡಿಯೋಗಳು ಅಸಲಿ ಎಂದು ತನಿಖಾ ತಂಡ ದೃಢಪಡಿಸಿದೆ. ಸಮವಸ್ತ್ರದಲ್ಲಿಯೇ…
ನವದೆಹಲಿ: ಮಧ್ಯ ಏಷ್ಯಾದಲ್ಲಿ ಬಿಕ್ಕಟ್ಟು ಪರಿಹಾರ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ…
ಹಾಸನ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.…
ಬೆಂಗಳೂರು: ಕರ್ನಾಟಕದ ಹಲವೆಡೆ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬೀದರ್, ಕಲಬುರ್ಗಿ,…