ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ಯುಗಾದಿ ಹಬ್ಬದ ಹೊಸ ತೊಡಕು ಹಿನ್ನೆಲೆ ನಗರದ ಹಲವೆಡೆ ಮಾಂಸ ಮಾರಾಟ ಜೋರಾಗಿದ್ದು, ಅದರಲ್ಲೂ ಗುಡ್ಡೆ ಮಾಂಸದ ಭರಾಟೆ ನಡೆದಿದೆ.
ಯುಗಾದಿ ಹಬ್ಬದ ಮಾರನೆ ದಿನ ಸೋಮವಾರವಿದ್ದ ಕಾರಣ ಇಂದು(ಏಪ್ರಿಲ್.1) ನೂರಾರು ಮೇಕೆ ಮತ್ತು ಕುರಿಗಳನ್ನು ಕಡಿದು ಗುಡ್ಡೆ ಮಾಂಸ ಮಾರಾಟ ಮಾಡಿದ್ದಾರೆ. ಈ ಗುಡ್ಡೆ ಮಾಂಸವನ್ನು ನಗರದ ಕೆ.ಜಿ ಕೊಪ್ಪಲು, ಕುಂಬಾರಕೊಪ್ಪಲು, ಒಂಟಿಕೊಪ್ಪಲು, ಪಡುವಾರಹಳ್ಳಿ ಸೇರಿದಂತೆ ಹಲವೆಡೆ ಭರ್ಜರಿ ಮಾರಾಟ ಮಾಡಲಾಗಿದ್ದು, ಒಂದು ಕೆ.ಜಿ.ಗುಡ್ಡೆ ಮಾಂಸಕ್ಕೆ 700 ರೂ ನಿಗಧಿ ಮಾಡಲಾಗಿದೆ.
ಯುಗಾದಿ, ಆಯುಧಪೂಜೆ, ಗೌರಿ ಹಾಗೂ ದೀಪಾವಳಿ ಹಬ್ಬಗಳ ಮಾರನೇ ದಿನ ಹೊಸ ತೊಡಕು ಎಂದು ಮಾಂಸದೂಟ ಮಾಡುವ ವಾಡಿಕೆ ಇದೆ. ಅಂತೆಯೇ ಮೈಸೂರಿನ ಸುತ್ತಮುತ್ತಲಿನ ಜನರು ಹಲವಾರು ವರ್ಷಗಳಿಂದ ಬಂದಿರುವ ಗುಡ್ಡೆ ಮಾಂಸ ಮಾರಾಟ ಮಾಡುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಇಂದು ನಗರದ ಜನರು ಗುಡ್ಡೆ ಮಾಂಸ ಖರೀದಿಗೆ ಮುಗಿಬಿದ್ದಿದ್ದು, ಭರ್ಜರಿ ಬಾಡೂಟ ಸೇವನೆ ಮಾಡಲಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…
ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…
ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…
ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…
ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…