ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ಯುಗಾದಿ ಹಬ್ಬದ ಹೊಸ ತೊಡಕು ಹಿನ್ನೆಲೆ ನಗರದ ಹಲವೆಡೆ ಮಾಂಸ ಮಾರಾಟ ಜೋರಾಗಿದ್ದು, ಅದರಲ್ಲೂ ಗುಡ್ಡೆ ಮಾಂಸದ ಭರಾಟೆ ನಡೆದಿದೆ.
ಯುಗಾದಿ ಹಬ್ಬದ ಮಾರನೆ ದಿನ ಸೋಮವಾರವಿದ್ದ ಕಾರಣ ಇಂದು(ಏಪ್ರಿಲ್.1) ನೂರಾರು ಮೇಕೆ ಮತ್ತು ಕುರಿಗಳನ್ನು ಕಡಿದು ಗುಡ್ಡೆ ಮಾಂಸ ಮಾರಾಟ ಮಾಡಿದ್ದಾರೆ. ಈ ಗುಡ್ಡೆ ಮಾಂಸವನ್ನು ನಗರದ ಕೆ.ಜಿ ಕೊಪ್ಪಲು, ಕುಂಬಾರಕೊಪ್ಪಲು, ಒಂಟಿಕೊಪ್ಪಲು, ಪಡುವಾರಹಳ್ಳಿ ಸೇರಿದಂತೆ ಹಲವೆಡೆ ಭರ್ಜರಿ ಮಾರಾಟ ಮಾಡಲಾಗಿದ್ದು, ಒಂದು ಕೆ.ಜಿ.ಗುಡ್ಡೆ ಮಾಂಸಕ್ಕೆ 700 ರೂ ನಿಗಧಿ ಮಾಡಲಾಗಿದೆ.
ಯುಗಾದಿ, ಆಯುಧಪೂಜೆ, ಗೌರಿ ಹಾಗೂ ದೀಪಾವಳಿ ಹಬ್ಬಗಳ ಮಾರನೇ ದಿನ ಹೊಸ ತೊಡಕು ಎಂದು ಮಾಂಸದೂಟ ಮಾಡುವ ವಾಡಿಕೆ ಇದೆ. ಅಂತೆಯೇ ಮೈಸೂರಿನ ಸುತ್ತಮುತ್ತಲಿನ ಜನರು ಹಲವಾರು ವರ್ಷಗಳಿಂದ ಬಂದಿರುವ ಗುಡ್ಡೆ ಮಾಂಸ ಮಾರಾಟ ಮಾಡುವ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬಂದಿದ್ದಾರೆ. ಹೀಗಾಗಿ ಇಂದು ನಗರದ ಜನರು ಗುಡ್ಡೆ ಮಾಂಸ ಖರೀದಿಗೆ ಮುಗಿಬಿದ್ದಿದ್ದು, ಭರ್ಜರಿ ಬಾಡೂಟ ಸೇವನೆ ಮಾಡಲಿದ್ದಾರೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…